ಪಂಜಾಬ್ ನಕಲಿ ಮದ್ಯ ದುರಂತಕ್ಕೆ 86 ಮಂದಿ ಬಲಿ: 25 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Aug 2, 2020, 9:39 AM IST
ಚಂಡೀಗಢ: ಪಂಜಾಬ್ ರಾಜ್ಯದಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಅಮೃತಸರ್, ಬಟಾಲಾ ಮತ್ತು ತರ್ನ್, ತರನ್ ಜಿಲ್ಲೆಗಳಲ್ಲಿ ಹೆಚ್ಚಿನ ಅನಾಹುತ ಸಂಭವಿಸಿದ್ದು, ಒಟ್ಟು 86 ಮಂದಿ ನಕಲಿ ಮದ್ಯ ಸೇವನೆಯ ಕಾರಣದಿಂದ ಸಾವನ್ನಪ್ಪಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ನ್ಯಾಯಾಂಗ ತನಿಖೆಗೆ ಆದೇಶಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಆರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ. ಅದಲ್ಲದೆ ಮೃತರ ಕುಟುಂಬಗಳಿಗೆ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಬುಧವಾರ ರಾತ್ರಿಯಿಂದ ಪಂಜಾಬ್ ನ ಕೆಲ ಜಿಲ್ಲೆಗಳಲ್ಲಿ ದಿಢೀರ್ ಸರಣಿ ಸಾವುಗಳು ವರದಿಯಾಗಿತ್ತು. ನಕಲಿ ಮದ್ಯ ಸೇವನೆಯೇ ಈ ಸರಣಿ ಸಾವಿಗೆ ಕಾರಣ ಎಂದು ವಿಚಾರಣೆಯಿಂದ ಬೆಳಕಿದೆ ಬಂದಿತ್ತು. ತರ್ನ್ ತರನ್ ಜಿಲ್ಲೆಯಲ್ಲಿ ಇದುವರೆಗೆ 63 ಮಂದಿ ಮೃತಪಟ್ಟರೆ, ಅಮೃತಸರದಲ್ಲಿ 12 ಮಂದಿ, ಮತ್ತು ಬಟಾಲಾದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.
ಅಮೃತಸರ, ಗುರುದಾಸ್ ಪುರ, ತರ್ನ್ ತರನ್ ಜಿಲ್ಲೆಯ ಹಲವೆಡೆಗಳಲ್ಲಿ ಶನಿವಾರ ಪೊಲೀಸರು ದಾಳಿ ನಡೆಸಿದ್ದು, ನಕಲಿ ಮಧ್ಯ ಮಾರಾಟ ಸಂಬಂದ 25 ಜನರನ್ನು ಬಂಧಿಸಲಾಗಿದೆ. ಕೆಲವು ಮಹಿಳಾ ಕಿಂಗ್ ಪಿನ್ ಗಳು, ಸಾರಿಗೆ ಮಾಲಕರು, ವಾಂಟೆಡ್ ಕ್ರಿಮಿನಲ್ ಗಳು, ವಿವಿಧ ಡಾಬಾ ಮಾಲಕರು ಈ ಜಾಲದಲ್ಲಿ ಸೇರಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ