ವರ್ಷದಲ್ಲಿ 25 ಸ್ಥಳನಾಮ ಬದಲು


Team Udayavani, Nov 12, 2018, 4:50 AM IST

rename-11-11.jpg

ಹೊಸದಿಲ್ಲಿ: ಉತ್ತರ ಪ್ರದೇಶ ಸರಕಾರ ಅಲಹಾಬಾದ್‌ಗೆ ಪ್ರಯಾಗ್‌ರಾಜ್‌, ಫೈಝಾಬಾದ್‌ಗೆ ಅಯೋಧ್ಯೆ ಎಂದು ನಾಮಕರಣ ಮಾಡುವುದರ ಜತೆಗೆ ಇನ್ನಷ್ಟು ಸ್ಥಳಗಳ ಹೆಸರು ಬದಲಾವಣೆಗೆ ಸೈ ಎಂದಿದೆ. ಕಳೆದೊಂದು ವರ್ಷದ ಅವಧಿಯಲ್ಲಿ ಕೇಂದ್ರ ಗೃಹ ಇಲಾಖೆ ದೇಶದ 25 ಪಟ್ಟಣ ಮತ್ತು ಗ್ರಾಮಗಳ ಹೆಸರನ್ನು ಬದಲು ಮಾಡಿ ರಾಜ್ಯಗಳು ಸಲ್ಲಿಸಿದ್ದ ಕೋರಿಕೆಗೆ ಅನುಮೋದನೆ ನೀಡಿದೆ. ಇದೇ ವೇಳೆ ಪಶ್ಚಿಮ ಬಂಗಾಲವನ್ನು ‘ಬಾಂಗ್ಲಾ’ ಎಂದು ಕರೆಯಲು ಅನುಮತಿ ನೀಡಬೇಕೆಂದು ಅಲ್ಲಿನ ಸರಕಾರ ಸಲ್ಲಿಸಿರುವ ಮನವಿ ಬಗ್ಗೆ ಇದುವರೆಗೆ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ.

ಗುಜರಾತ್‌ ಮುಖ್ಯಮಂತ್ರಿ ವಿಜಯ ರುಪಾಣಿ ಅಹ್ಮದಾಬಾದ್‌ ಬದಲಾಗಿ ‘ಕರ್ಣಾವತಿ’ ಎಂದು ನಾಮಕರಣ ಮಾಡುವ ಚಿಂತನೆ ಇದೆ ಎಂದು ಘೋಷಣೆ ಮಾಡಿದ್ದಾರೆ. ಉ.ಪ್ರ. ಸರಕಾರ 2 ನಗರಗಳ ಹೆಸರು ಬದಲಾವಣೆಯ ಘೋಷಣೆ ಮಾಡಿದ್ದರೂ ಕೇಂದ್ರ ಸರಕಾರಕ್ಕೆ ಈ ಬಗ್ಗೆ ಮನವಿಯನ್ನು ಇನ್ನಷ್ಟೇ ಸಲ್ಲಿಸಬೇಕಾಗಿದೆ.

ಅನುಮೋದನೆಗೊಂಡ ಪಟ್ಟಣ – ಗ್ರಾಮಗಳ ಪೈಕಿ ಪ್ರಮುಖವೆಂದರೆ ಆಂಧ್ರಪ್ರದೇಶದ ರಾಜಮುಂಡ್ರಿಯನ್ನು ‘ರಾಜಾ ಮಹೇಂದ್ರವರ್ಮಮ್‌’, ಕ್ಷಿಪಣಿಗಳ ಪರೀಕ್ಷಾರ್ಥ ಉಡಾವಣೆ ನಡೆಸುವ ಒಡಿಶಾದ ಔಟರ್‌ ವ್ಹೀಲರ್‌ ಅನ್ನು ‘ಎ.ಪಿ.ಜೆ.ಅಬ್ದುಲ್‌ ಕಲಾಂ ದ್ವೀಪ’, ಕೇರಳದ ಮಲಪ್ಪುರ ಜಿಲ್ಲೆಯ ಅರೀಕೋಡೆಯನ್ನು ‘ಅರಿಕ್ಕೋಡ್‌’ ಎಂದು ಬದಲಿಸಲು ಅನುಮೋದನೆ ನೀಡಿದೆ. ಹರಿಯಾಣದ ಪಿಂಡಾರಿ ನಗರವನ್ನು ‘ಪಾಂಡು-ಪಿಂಡಾರ’ ಎಂದೂ ನಾಗಾಲ್ಯಾಂಡಿನ ಸಾಂಪುರ್‌ ನಗರವನ್ನು ‘ಸಾಮ್‌ಪುರಿ’ ಎಂದೂ ಬದಲಾಯಿಸಲಾಗಿದೆ.

ಅದೇ ರೀತಿ ಕೆಲ ಪ್ರಸ್ತಾವನೆಗಳೂ ತಿರಸ್ಕೃತಗೊಂಡಿವೆ. ಹಾಲಿ ಇರುವ ನಿಯಮಗಳನ್ನು ಆಧರಿಸಿ ಮತ್ತು ಸಂಬಂಧಿತರ ಜತೆಗೆ ಚರ್ಚಿಸಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿ ಹೇಳಿದ್ದಾರೆ. 2011ರಲ್ಲಿ ಒರಿಸ್ಸಾವನ್ನು ‘ಒಡಿಶಾ’ ಎಂದು ಮರು ನಾಮಕರಣಗೊಳಿಸಲಾಗಿತ್ತು. 2014ರಲ್ಲಿ ‘ಬ್ಯಾಂಗಲೋರ್‌’ ಎಂಬ ಹೆಸರನ್ನು ಬದಲಿಸಿ ಬೆಂಗಳೂರು ಎಂಬ ಪ್ರಸ್ತಾವ ಸೇರಿ ಕರ್ನಾಟಕದ 11 ನಗರಗಳ ಹೆಸರುಗಳಿಗೆ ಅನುಮೋದನೆ ನೀಡಿತ್ತು. 

ರಾಜಕೀಯ ಲೆಕ್ಕಾಚಾರ: ಚರ್ಚೆ
ಅಷ್ಟಕ್ಕೂ ಹೆಸರು ಬದಲಾವಣೆಯ ಹಿಂದೆ ರಾಜಕೀಯ ಲೆಕ್ಕಾಚಾರ ಹೊಂದಿದೆ ಎಂಬ ಬಗ್ಗೆಯೂ ಚರ್ಚೆಯಾಗುತ್ತಿದೆ. ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇದಕ್ಕೆ ಅನುಮೋದನೆ ನೀಡುವ ಮೂಲಕ ಇದರ ಲಾಭ ಪಡೆದುಕೊಳ್ಳಲು ಹೊರಟಿದೆ ಎಂದೂ ಹೇಳಲಾಗುತ್ತಿದೆ. ಇವೆಲ್ಲದರ ನಡುವೆ ಇತ್ತೀಚೆಗೆ ಆರ್‌ಎಸ್‌ಎಸ್‌ ನಾಯಕರು ನಡೆಸಿದ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಇಂಥದ್ದೊಂದು ಸಲಹೆ ನೀಡಿದ್ದರು ಎಂದೂ ಹೇಳಲಾಗುತ್ತಿದೆ. ಪಶ್ಚಿಮ ಬಂಗಾಲವನ್ನು ಬಾಂಗ್ಲಾ ಎಂದು ಬದಲಿಸುವುದರ ಹಿಂದೆಯೂ ರಾಜಕೀಯ ಲೆಕ್ಕಾಚಾರ ಇದೆ ಎನ್ನಲಾಗಿದೆ.

– ದೇಶದ ಪ್ರಮುಖ ನಗರಗಳ ಹೆಸರು ಬದಲು ಕ್ರಮ ನಡುವೆಯೇ ಕೇಂದ್ರದ ಕ್ರಮ
– ಹೆಸರು ಬದಲಿನ ಜತೆಗೆ ಕೆಲವೊಂದು ಪ್ರಸ್ತಾವಗಳೂ ತಿರಸ್ಕೃತ
– 2011ರಲ್ಲಿ ಬೆಂಗಳೂರು ಸೇರಿ ಕರ್ನಾಟಕದ 11 ನಗರಗಳ ಹೆಸರು ಬದಲಿಗೆ ನಿರ್ಧಾರ
– ಹೊಸ ಪಟ್ಟಿಯಲ್ಲಿ  ಕರ್ನಾಟಕದ ನಗರ- ಪಟ್ಟಣಗಳಿಲ್ಲ

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.