PM Modi ತಂಡಕ್ಕೆ 25 ಖಾಸಗಿ ತಜ್ಞರು? ನಿರ್ದೇಶಕ, ಜಂಟಿ ಕಾರ್ಯದರ್ಶಿ ಹುದ್ದೆಗೆ ನೇಮಕ
Team Udayavani, Mar 2, 2024, 7:20 AM IST
ಹೊಸದಿಲ್ಲಿ: ವಿವಿಧ ವಿಷಯಗಳಲ್ಲಿ ಪರಿಣತರಾಗಿರುವ ಖಾಸಗಿ ವಲಯದ 25 ತಜ್ಞರು ಶೀಘ್ರದಲ್ಲೇ ಕೇಂದ್ರ ಸರಕಾರದ ಪ್ರಮುಖ ಹುದ್ದೆಗಳಿಗೆ ಸೇರ್ಪಡೆಯಾಗಲಿದ್ದಾರೆ.
ಕೇಂದ್ರ ವಿವಿಧ ಇಲಾಖೆಗಳಲ್ಲಿ ಮೂವರು ಜಂಟಿ ಕಾರ್ಯದರ್ಶಿಗಳು, 22 ನಿರ್ದೇಶಕರು ಅಥವಾ ಉಪ ಕಾರ್ಯದರ್ಶಿಗಳ ನೇಮಕಕ್ಕೆ ಪ್ರಧಾನಿ ಮೋದಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿ (ಎಸಿಸಿ)ಯು ಅನುಮೋದನೆ ನೀಡಿದೆ.
ಆಡಳಿತ ಸುಧಾರಣೆಯ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳ ಪ್ರತಿಭೆಗಳನ್ನು ಸರಕಾರದ ಭಾಗವಾಗಿ ಸಲು ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ಈ ನೇಮಕ ನಡೆಯಲಿದೆ.
ಸಾಮಾನ್ಯವಾಗಿ ಐಎಎಸ್, ಐಪಿಎಸ್, ಐಎಫ್ಒಎಸ್ (ಭಾರತೀಯ ಅರಣ್ಯ ಸೇವೆ) ಅಧಿಕಾರಿಗಳು ಹಾಗೂ ಇತರ “ಎ’ ಗ್ರೂಪ್ ಅಧಿಕಾರಿಗಳು ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ ಜಂಟಿ ಕಾರ್ಯದರ್ಶಿ ಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳ ಹುದ್ದೆಗಳನ್ನು ಅಲಂಕರಿಸಲಿದ್ದಾರೆ.
2018ರ ಜೂನ್ನಲ್ಲಿ ಮೊದಲ ಬಾರಿಗೆ ಸಿಬಂದಿ ತರಬೇತಿ ಸಚಿವಾಲಯವು 10 ಜಂಟಿ ಕಾರ್ಯದರ್ಶಿಗಳ ಹುದ್ದೆಗಳಿಗೆ ಒಪ್ಪಂದದ ಆಧಾರದಲ್ಲಿ ನೇರ ನೇಮಕಕ್ಕೆ ತಜ್ಞರಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಕೇಂದ್ರ ಲೋಕಸೇವಾ ಆಯೋಗ ಆಯೋಗವು (ಯುಪಿಎಸ್ಸಿ) ಈ ಹುದ್ದೆಗಳಿಗೆ ಈ ನೇಮಕ ನಡೆಸಿತ್ತು. 2021ರ ಅಕ್ಟೋಬರ್ನಲ್ಲಿ ಪುನಃ ಮೂವರು ಜಂಟಿ ಕಾರ್ಯದರ್ಶಿಗಳು, 19 ನಿರ್ದೇಶಕರು ಮತ್ತು 9 ಉಪ ಕಾರ್ಯದರ್ಶಿಗಳು ಸೇರಿದಂತೆ ಒಟ್ಟು 31 ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಯುಪಿಎಸ್ಸಿ ನಡೆಸಿತ್ತು.
ಪ್ರಸ್ತುತ ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಸಗಿ ವಲಯದ 33 ತಜ್ಞರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ 8 ಜಂಟಿ ಕಾರ್ಯದರ್ಶಿಗಳು, 16 ನಿರ್ದೇಶಕರು ಮತ್ತು 9 ಉಪ ಕಾರ್ಯದರ್ಶಿಗಳು ಸೇರಿದ್ದಾರೆ. ಈಗ ವಿವಿಧ ಹುದ್ದೆಗಳಿಗೆ ಹೊಸದಾಗಿ ಖಾಸಗಿ ವಲಯದ 25 ತಜ್ಞರ ನೇಮಕಕ್ಕೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ