ಕಾಶ್ಮೀರಕ್ಕೆ ಮತ್ತೆ 25 ಸಾವಿರ ಸೈನಿಕರ ರವಾನೆ
Team Udayavani, Aug 1, 2019, 11:30 PM IST
ಶ್ರೀನಗರ: ಕಾಶ್ಮೀರಕ್ಕೆ ಮತ್ತೆ 25 ಸಾವಿರ ಸೈನಿಕರನ್ನು ಕಳುಹಿಸಲಾಗಿದೆ. ವಾರದ ಹಿಂದೆಯಷ್ಟೇ 10 ಸಾವಿರ ಅರೆಸೇನಾ ಪಡೆಗಳನ್ನು ಕಾಶ್ಮೀರಕ್ಕೆ ಕಳುಹಿಸಿಕೊಡಲಾಗಿತ್ತು. ವಾರಗಳ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 2 ದಿನಗಳ ಕಾಶ್ಮೀರ ಭೇಟಿಯಲ್ಲಿದ್ದರು. ದೋವಲ್ ಹಿಂದಿರುಗಿದ ಬಳಿಕ ಈ ಬೆಳವಣಿಗೆಗಳು ನಡೆದಿದ್ದು, ಕುತೂಹಲ ಕೆರಳಿಸಿದೆ.
ಆದರೆ ಇದಕ್ಕೆ ಯಾವುದೇ ಕಾರಣಗಳನ್ನು ಸೇನೆಯಾಗಲಿ, ಸರಕಾರವಾಗಲಿ ನೀಡಲಿಲ್ಲ. ಕೆಲವು ಮೂಲಗಳ ಪ್ರಕಾರ ಯಾತ್ರಾರ್ಥಿಗಳ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಇಷ್ಟೊಂದು ಸೈನಿಕರನ್ನು ಈ ಹಿಂದೆ ನಿಯೋಜಿಸಲಾಗಿಲ್ಲ ಎಂದು ತಿಳಿದುಬಂದಿದೆ. ಇನ್ನು ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿದೆ.
ಪಿಎಂ ಭೇಟಿಯಾದ ಕಾಶ್ಮೀರದ ಮಾಜಿ ಸಿಎಂ
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ಕಾಶ್ಮೀರದ ರಾಜ್ಯ ವಿಧಾನ ಸಭೆಯ ಚುನಾವಣೆಯನ್ನು ಆದಷ್ಟು ಬೇಗ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ. ನ್ಯಾಶನಲ್ ಕಾನ್ಫರೆನ್ಸ್ನ ಫಾರೂಕ್ ಅಬ್ದುಲ್ಲಾ ಅವರೂ ಒಮರ್ ಅಬ್ದುಲ್ಲಾ ಜತೆ ತೆರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!