ಬೀದಿ ನಾಯಿಗೆ ಆಹಾರ ನೀಡುವ ವೇಳೆ ಯುವತಿ ಮೇಲೆ ಹರಿದ ಕಾರು: ಗಂಭೀರ
Team Udayavani, Jan 16, 2023, 2:41 PM IST
ಚಂಡಿಗಢ: ಬೀದಿ ನಾಯಿಗೆ ಆಹಾರ ನೀಡುತ್ತಿರುವಾಗ ಕಾರು ಹರಿದು ಯುವತಿಯೊಬ್ಬಳು ಗಂಭೀರ ಗಾಯಗೊಂಡಿರುವ ಘಟನೆ ಚಂಡಿಗಢದಲ್ಲಿ ನಡೆದಿದೆ.
ಜ.14 (ಶನಿವಾರ) ರಸ್ತೆ ಬದಿಯ ಬೀದಿಯ ನಾಯಿಗೆ ತೇಜಸ್ವಿತಾ(25) ಆಹಾರ ನೀಡಲು ತೆರಳಿದ್ದಾರೆ. ಬೀದಿ ನಾಯಿಯನ್ನು ಮುದ್ದು ಮಾಡುತ್ತಾ, ಆಹಾರವನ್ನು ನೀಡುತ್ತಿದ್ದ ವೇಳೆ ಅತ್ತ ಕಡೆಯಿಂದ ವೇಗವಾಗಿ ಬಂದ ಕಾರು ತೇಜಸ್ವಿತಾ ಅವರ ಮೇಲೆ ಹರಿದು ಪರಾರಿಯಾಗಿದೆ.
ಗಂಭೀರವಾಗಿ ಗಾಯಗೊಂಡ ತೇಜಸ್ವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಳ ತಲೆಯ ಎರಡೂ ಬದಿಗಳಲ್ಲಿ ಹೊಲಿಗೆಗಳನ್ನು ಹಾಕಲಾಗಿದೆ.
ಇದನ್ನೂ ಓದಿ: ಕಾಪು: ರಸ್ತೆ ಬಿಟ್ಟು ಗೂಡಂಗಡಿಯೊಳಗೆ ನುಗ್ಗಿದ ಲಾರಿ; ಓರ್ವ ಗಾಯ
ಯುವತಿ ತಂದೆ ಓಜಸ್ವಿ ಕೌಶಲ್ ಸೆಕ್ಟರ್ 61 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತೇಜಸ್ವಿತಾ ಆರ್ಕಿಟೆಕ್ಟ್ ಪದವೀಧರರಾಗಿದ್ದು, ಯುಪಿಎಸ್ಸಿಗೆ ತಯಾರಿ ನಡೆಸುತ್ತಿದ್ದಾಳೆ ಎಂದು ತಂದೆ ಹೇಳಿದ್ದಾರೆ.
ತೇಜಸ್ವಿತಾ ಹಾಗೂ ಅವರ ತಾಯಿ ಮಾರುಕಟ್ಟೆ ಬಳಿ ಪ್ರತಿನಿತ್ಯ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದರು.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ