ಮದುವೆಯಾದ ಮೂರೇ ತಿಂಗಳಿಗೆ ಪತಿಗೆ ಹೃದಯಾಘಾತ… ಆಘಾತಕ್ಕೊಳಗಾಗಿ ಕಟ್ಟಡದಿಂದ ಜಿಗಿದ ಪತ್ನಿ
Team Udayavani, Feb 27, 2024, 2:50 PM IST
ನವದೆಹಲಿ: ಮದುವೆಯಾಗಿ ಮೂರೂ ತಿಂಗಳಿಗೆ ಪತಿ ಪತ್ನಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆಯೊಂದು ದೆಹಲಿಯ ಗಾಜಿಯಾಬಾದ್ನಲ್ಲಿ ಸಂಭವಿಸಿದೆ.
ಮದುವೆಯಾಗಿ ಮೂರೇ ತಿಂಗಳಿಗೆ ಪತಿ ಹೃದಯಾಘಾತಗೊಂಡು ಮೃತಪಟ್ಟರೆ ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಆಘಾತಗೊಂಡು ವಾಸವಿದ್ದ ಏಳು ಅಂತಸ್ಥಿನ ಕಟ್ಟಡದಿಂದ ಜಿಗಿದು ಜೀವ ಕಳೆದುಕೊಂಡಿದ್ದಾಳೆ.
ಏನಿದು ಘಟನೆ:
ಗಾಜಿಯಾಬಾದ್ ನ ಅಭಿಷೇಕ್ ಅಹ್ಲುವಾಲಿಯಾ ಜೊತೆ ಅಂಜಲಿ ಕಳೆದ ವರ್ಷ ನವೆಂಬರ್ ನಲ್ಲಿ ಮದುವೆಯಾಗಿದ್ದರು ಇಬ್ಬರೂ ಜೊತೆಯಾಗಿ ತಿರುಗಾಟ ನಡೆಸಿದ್ದಾರೆ ಅದರಂತೆ ನಿನ್ನೆ (ಸೋಮವಾರ) ದೆಹಲಿಯಲ್ಲಿರುವ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ ಈ ವೇಳೆ ಇದ್ದಕಿದ್ದಂತೆ ಅಭಿಷೇಕ್ ಗೆ ಹೃದಯಾಘತವಾಗಿದೆ ಆ ಕೂಡಲೇ ಅಲ್ಲಿದ್ದ ಜನರು ಸೇರಿ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಗಾಬರಿಯಾದ ಪತ್ನಿ ಅಂಜಲಿ ತನ್ನ ಸ್ನೇಹಿತರು ಹಾಗೂ ಕುಟುಂಬ ಸದಸ್ಯರಿಗೆ ಪತಿಗೆ ಹೃದಯಾಘಾತವಾದ ವಿಚಾರವನ್ನು ತಿಳಿಸಿದ್ದಾಳೆ.
ಗಂಭೀರ ಸ್ಥಿತಿಯಲ್ಲಿದ್ದ ಅಭಿಷೇಕ್ ಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಸಂಜೆ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಕುಟುಂಬ ಸದಸ್ಯರು ಅಭಿಷೇಕ್ ಮೃತದೇಹವನ್ನು ಗಾಜಿಯಾಬಾದ್ ನಲ್ಲಿರುವ ಫ್ಲಾಟ್ ಗೆ ತಂದಿದ್ದಾರೆ ಈ ವೇಳೆ ಮೃತ ಅಭಿಷೇಕ್ ಜೊತೆಗೆ ಇದ್ದ ಅಂಜಲಿ ಇದ್ದಕಿದ್ದಂತೆ ಎದ್ದು ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದಾಳೆ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಇಂದು( ಮಂಗಳವಾರ) ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ.
ಒಟ್ಟಾಗಿ ಬಾಳಿ ಬದುಕಬೇಕಿದ್ದ ನವ ಜೋಡಿ ವಿಧಿಯಾಟಕ್ಕೆ ದುರಂತ ಅಂತ್ಯ ಕಾಣುವಂತಾಗಿದ್ದು ವಿಪರ್ಯಾಸವೇ ಸರಿ.
ಇದನ್ನೂ ಓದಿ: Sidhu Moose Wala: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸಿದ್ದು ಮೂಸೆವಾಲ ಪೋಷಕರು – ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ