ಮದುವೆ ಹಾಲ್ ಗೋಡೆ ಕುಸಿದು 26 ಸಾವು; ಪ್ರಧಾನಿ ಪರಿಹಾರ ಘೋಷಣೆ
Team Udayavani, May 11, 2017, 12:18 PM IST
ಜೈಪುರ : ರಾಜಸ್ಥಾನದ ಭರತ್ಪುರ ಜಿಲ್ಲೆಯಲ್ಲಿ ತೀವ್ರವಾಗಿ ಬೀಸಿದ ಸುಂಟರಗಾಳಿಗೆ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಹಾಲ್ನಗೋಡೆ ಉರುಳಿ ಬಿದ್ದು ಕನಿಷ್ಠ 26 ಮಂದಿ ಮೃತಪಟ್ಟ ಘಟನೆ ನಿನ್ನೆ ಬುಧವಾರ ತಡರಾತ್ರಿ ಸಂಭವಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಮದುವೆ ಸಮಾರಂಭ ನಡೆಯುತ್ತಿದ್ದ ಹಾಲ್ನ ಗೋಡೆ ಮತ್ತು ಅದಕ್ಕೆ ತಾಗಿಕೊಂಡಿದ್ದ ಟಿನ್ ಶೆಡ್ ಕುಸಿದು ಬಿತ್ತು ಎಂದು ಭರತ್ಪುರ ಪೊಲೀಸ್ ಸುಪರಿಂಟೆಂಡೆಂಟ್ ಅನಿಲ್ ತಾಂಕ್ ತಿಳಿಸಿದ್ದಾರೆ.
ಗಾಯಗೊಂಡ 26 ಮಂದಿಯಲ್ಲಿ 15 ಜನರ ಸ್ಥಿತಿ ಗಂಭೀರವಿದೆ ಎಂದವರು ಹೇಳಿದ್ದಾರೆ.
ಕುಸಿದು ಬಿದ್ದ ಗೋಡೆಯು 90 ಅಡಿ ಉದ್ದ ಹಾಗೂ 12ರಿಂದ 13 ಅಡಿ ಎತ್ತರದ್ದಾಗಿತ್ತು. ಮದುವೆ ಸಮಾರಂಭಕ್ಕಾಗಿ ಈ ಗೋಡೆಯ ಸನಿಹದಲ್ಲೇ ಫುಡ್ ಸ್ಟಾಲ್ಗಳನ್ನು ಹಾಕಲಾಗಿತ್ತು.
ಮದುವೆ ಹಾಲ್ನ ಮಾಲಕನ ಮೇಲೆ ಕೇಸು ದಾಖಲಿಸಲಾಗಿದೆ ಎಂದಿರುವ ಪೊಲೀಸರು ಭರತ್ಪುರದಲ್ಲಿನ ಎಲ್ಲ ಮದುವೆ ಹಾಲ್ಗಳ ಸ್ಥಿತಿ ಗತಿ ಹಾಗೂ ಸುರಕ್ಷೆಯ ಬಗ್ಗೆ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಮೃತರಿಗಾಗಿ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ಸೂಕ್ತ ಸಕಾಲಿಕ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ