Cheetah Cubs: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚೀತಾ ಜ್ವಾಲಾ
Team Udayavani, Jan 23, 2024, 9:51 AM IST
ಮಧ್ಯಪ್ರದೇಶ: ದೇಶದ ಚೀತಾಗಳ ಆವಾಸಸ್ಥಾನವಾಗಿರುವ ಕುನೋ ರಾಷ್ಟ್ರೀಯ ಉದ್ಯಾನವನದಿಂದ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ನಮೀಬಿಯಾದಿಂದ ತರಲಾಗಿದ್ದ ಹೆಣ್ಣು ಚಿರತೆ ಜ್ವಾಲಾ 3 ಮರಿಗಳಿಗೆ ಜನ್ಮ ನೀಡಿದೆ.
ಮರಿಗಳ ಆರೋಗ್ಯ ಸ್ಥಿತಿ ಚೆನ್ನಾಗಿದ್ದು, ಆರೈಕೆ ಮಾಡಲಾಗುತ್ತಿದೆ ಎಂದು ಕುನೋ ವೈದ್ಯಕೀಯ ತಂಡ ತಿಳಿಸಿದೆ. ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರು ಸಾಮಾಜಿಕ ಮಾಧ್ಯಮ ‘X’ ನಲ್ಲಿ ಚಿರತೆ ಮರಿಗಳ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಹೆಣ್ಣು ಚಿರತೆ ಆಶಾ ಕೂಡ 3 ಮರಿಗಳಿಗೆ ಜನ್ಮ ನೀಡಿತ್ತು ಅದಾದ ಬಳಿಕ ಇದೀಗ ಚೀತಾ ಜ್ವಾಲಾ ಮೂರೂ ಮರಿಗಳಿಗೆ ಜನ್ಮ ನೀಡಿದೆ.
ಮಾಹಿತಿಯ ಪ್ರಕಾರ, ಮಾರ್ಚ್ 2023 ರಲ್ಲಿ, ಹೆಣ್ಣು ಚಿರತೆ ಜ್ವಾಲಾ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು, ಆದರೆ ನಾಲ್ಕರಲ್ಲಿ ಒಂದು ಮರಿ ಮಾತ್ರ ಬದುಕುಳಿದಿದೆ. ಆಗ ಕುನೋ ಆಡಳಿತ ಮಂಡಳಿಯು ಮರಿಗಳ ಸಾವಿಗೆ ಬಿಸಿಲಿನ ತಾಪವೇ ಕಾರಣ ಎಂದು ಹೇಳಿತ್ತು.
ಪರಿಸರ ಸಚಿವ ಭೂಪೇಂದ್ರ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ‘ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಜ್ವಾಲಾ ಎಂಬ ನಮೀಬಿಯಾ ಚಿರತೆ ಮೂರು ಮರಿಗಳಿಗೆ ಜನ್ಮ ನೀಡಿದೆ, ನಮೀಬಿಯಾದ ಚಿರತೆ ಆಶಾ ತನ್ನ ಮರಿಗಳಿಗೆ ಜನ್ಮ ನೀಡಿದ ಕೆಲವೇ ವಾರಗಳಲ್ಲಿ ಮತ್ತೊಂದು ಒಳ್ಳೆಯ ಸುದ್ದಿ ಸಿಕ್ಕಿದೆ. ಎಲ್ಲಾ ವನ್ಯಜೀವಿ ಪ್ರೇಮಿಗಳಿಗೆ ಶುಭಾಶಯಗಳು. ಭಾರತದಲ್ಲಿ ವನ್ಯಜೀವಿಗಳು ಇದೇ ರೀತಿಯಲ್ಲಿ ಅಭಿವೃದ್ಧಿ ಹೊಂದಬೇಕು. ಪ್ರಾಜೆಕ್ಟ್ ಚೀತಾ ಯಶಸ್ವಿಯಾಗಲಿ.” ಎಂದು ಬರೆದುಕೊಂಡಿದ್ದಾರೆ.
A Namibian Cheetah named Jwala has given birth to three cubs. This comes just weeks after Namibian Cheetah Aasha gave birth to her cubs.
Union Environment Minister Bhupender Yadav shares the video on his ‘X’ handle. pic.twitter.com/dgOsISpTU0
— ANI (@ANI) January 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ