ಮಕ್ಕಳ ಕಳ್ಳರೆಂದು ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರ ಮೇಲೆ ಗುಂಪು ಥಳಿತ!
Team Udayavani, Jul 27, 2019, 3:09 PM IST
ಭೋಪಾಲ್: ಮಕ್ಕಳನ್ನು ಹಿಡಿಯುವ ಕಳ್ಳರು ಎಂದು ತಪ್ಪಾಗಿ ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ನವಾಲ್ ಸಿನ್ ಗ್ರಾಮದಲ್ಲಿ ಗ್ಯಾಂಗ್ ವೊಂದು ಮಕ್ಕಳನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆಂಬ ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಗುಂಪೊಂದು ಗುರುವಾರ ರಾತ್ರಿ ರಸ್ತೆಯ ಮೇಲೆ ಮರವನ್ನು ಕಡಿದು ಹಾಕಿ ಸಂಚಾರ ಬಂದ್ ಮಾಡಿದ್ದರು.
ಈ ಸಂದರ್ಭದಲ್ಲಿ ಕಾರಿನಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಧರ್ಮೇಂದ್ರ ಶುಕ್ಲಾ, ಧರ್ಮು ಸಿಂಗ್ ಲಾಂಜಿವರ್ ಮತ್ತು ಲಲಿತ್ ಬಾರಸ್ಕರ್ ತೆರಳುತ್ತಿದ್ದರು. ರಸ್ತೆ ಮಧ್ಯೆ ಮರ ಕಡಿದು ಹಾಕಿದ್ದನ್ನು ಗಮನಿಸಿ, ಯಾರೋ ಹೆದ್ದಾರಿ ದರೋಡೆಕೋರರು ಸಂಚು ನಡೆಸುತ್ತಿದ್ದಾರೆಂದು ಭಾವಿಸಿ ಕಾರನ್ನು ನಿಲ್ಲಿಸದೇ(ಕಿರಿದಾದ ಸ್ಥಳದಲ್ಲಿಯೇ) ಮುಂದೆ ಹೋಗಿದ್ದರು.
ಇವರು ಮಕ್ಕಳ ಕಳ್ಳರು ಎಂದು ಶಂಕಿಸಿದ ಗ್ರಾಮಸ್ಥರು ಕಾರನ್ನು ಹಿಂಬಾಲಿಸಿಕೊಂಡು ಹೋಗಿ ತಡೆದು, ಕಾರನ್ನು ಜಖಂಗೊಳಿಸಿ, ಕಾರಿನಲ್ಲಿದ್ದ ಮೂವರು ಕಾಂಗ್ರೆಸ್ ಮುಖಂಡರನ್ನು ಹೊರಗೆಳೆದು ಹಲ್ಲೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಬೆತುಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಕಳೆದ ಕೆಲವು ವಾರಗಳಿಂದ ಮಧ್ಯಪ್ರದೇಶದಾದ್ಯಂತ ಮಕ್ಕಳ ಅಪಹರಣ ನಡೆದಿರುವ ಪ್ರಕರಣ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಶಂಕೆಯಿಂದಾಗಿ ಗುಂಪು ಥಳಿತ ಪ್ರಕರಣ ನಡೆಯುತ್ತಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ