ಕೋವಿಡ್ ಅವಧಿಯಲ್ಲಿ 3 ಕೋಟಿ ಹೊಸ ಜನ್‌ಧನ್‌ ಖಾತೆ; ಶೇ. 60 ಏರಿಕೆ


Team Udayavani, Oct 27, 2020, 7:55 PM IST

SBI Jandhan

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಕೋವಿಡ್‌ ಸಾಂಕ್ರಾಮಿಕ ಸಮಯದಲ್ಲಿ ಜನ್‌ಧನ್ ಬ್ಯಾಂಕ್ ಖಾತೆಗಳನ್ನು ತೆರೆದವರ ಸಂಖ್ಯೆ ಹೆಚ್ಚಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನಡೆಸಿದ ಅಧ್ಯಯನ ಪ್ರಕಾರ, ಕೋವಿಡ್‌ ಸಾಂಕ್ರಾಮಿಕ ಸಮಯದಲ್ಲಿ ಜನ ಧನ್ ಖಾತೆ ತೆರೆಯುವ ಪ್ರಮಾಣವು ಶೇ. 60 ಹೆಚ್ಚಾಗಿದೆ.

ಎಪ್ರಿಲ್ 1 ಮತ್ತು ಅಕ್ಟೋಬರ್ 14ರ ನಡುವೆ ಸುಮಾರು 3 ಕೋಟಿ ಹೊಸ ಖಾತೆಗಳನ್ನು ತೆರೆಯಲಾಗಿದೆ. ಠೇವಣಿ 11,600 ಕೋಟಿ ರೂ. ಇರಿಸಲಾಗಿದೆ. ಇದರೊಂದಿಗೆ ಒಟ್ಟು ಜನ ಧನ್ ಖಾತೆಗಳ ಸಂಖ್ಯೆ 41.05 ಕೋಟಿಗೆ ಏರಿಕೆಯಾಗಿದೆ. ಈ ಖಾತೆಗಳಲ್ಲಿ ಒಟ್ಟು 1.31 ಲಕ್ಷ ಕೋಟಿ ರೂ. ಇದೆ.

ಎಸ್‌ಬಿಐ ಇಕೋರಾಪ್ ಸಂಶೋಧನಾ ವರದಿಯ ಪ್ರಕಾರ, ಜನ್ ಧನ್ ಎಪ್ರಿಲ್‌ನಲ್ಲಿ ಸರಾಸರಿ 3,400 ರೂ. ಉಳಿತಾಯ ಇತ್ತು. ಇದು ಸೆಪ್ಟೆಂಬರ್‌ನಲ್ಲಿ 3,168 ರೂ.ಗೆ ಇಳಿಕೆಯಾಗಿದೆ. ಆದರೆ ಬಳಿಕ ಅಕ್ಟೋಬರ್‌ನಲ್ಲಿ ಮತ್ತೆ ಸ್ವಲ್ಪ ಹೆಚ್ಚಳದೊಂದಿಗೆ ಸರಾಸರಿ ಉಳಿತಾಯ 3185 ರೂ.ಗೆ ಏರಿಕೆಯಾಗಿದೆ.

ಪ್ರಧಾನ್ ಮಂತ್ರಿ ಧನ್ ಯೋಜನೆ (PMJDY) ಅನ್ನು ಆಗಸ್ಟ್ 2014ರಲ್ಲಿ ಪ್ರಾರಂಭಿಸಲಾಯಿತು.ಯೋಜನೆಯಡಿ ಪ್ರತಿ ಕುಟುಂಬದಿಂದ ಖಾತೆ ತೆರೆಯುವ ಗುರಿಯನ್ನು ನಿಗದಿಪಡಿಸಲಾಗಿದೆ. ಈ ಖಾತೆಗಳಲ್ಲಿ 10,000 ರೂ. ಓವರ್‌ಡ್ರಾಫ್ಟ್ ಸೌಲಭ್ಯ ಲಭ್ಯವಿದೆ.

2.5 ಮಿಲಿಯನ್ ಹೊಸ ಇಪಿಎಫ್ ಚಂದಾದಾರರು
ಹೆಚ್ಚುವರಿಯಾಗಿ ಎಪ್ರಿಲ್-ಆಗಸ್ಟ್ ಅವಧಿಯಲ್ಲಿ, 2.5 ಮಿಲಿಯನ್ ಹೊಸ ಇಪಿಎಫ್ ಚಂದಾದಾರರು ಸೇರಿಕೊಂಡಿದ್ದಾರೆ. ಅದರಲ್ಲಿ 12.4 ಲಕ್ಷ ಜನರು ಮೊದಲ ಬಾರಿ ಪೇರೋಲ್‌ ಪಡೆಯುತ್ತಿರುವವರಾಗಿದ್ದಾರೆ. ಎಸ್‌ಬಿಐ ವರದಿಯು ಮೂರನೇ ಹಣಕಾಸಿನ ಉತ್ತೇಜನ (ಪರಿಹಾರ ಪ್ಯಾಕೇಜ್) ನಂತಹ ಖಾತೆಗಳಿಗೆ ಹೆಚ್ಚಿನ ಹಣವನ್ನು ಸೇರಿಸಲು ಸರಕಾಕ್ಕೆ ಸೂಚಿಸಿದೆ. ಉದಾಹರಣೆಗೆ, NREGA ಯೋಜನೆಯನ್ನು ಮತ್ತಷ್ಟು ಹೆಚ್ಚಿಸಬೇಕು. ಅಲ್ಲದೆ ನಗರದಲ್ಲಿ ವಾಸಿಸುವ ಬಡ ಜನರಿಗೆ ಹೊಸ ಯೋಜನೆಗಳನ್ನು ಪ್ರಾರಂಭಿಸಬೇಕು ಎಂದು ಸಲಹೆ ನೀಡಿದೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.