ಶಿಮ್ಲಾ : ಕಾರು ಪ್ರಪಾತಕ್ಕೆ ಬಿದ್ದು ಮೂವರು ಯುವಕರ ಸಾವು
Team Udayavani, Aug 24, 2018, 11:02 AM IST
ಶಿಮ್ಲಾ : ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಕಾರೊಂದು ಪ್ರಪಾತಕ್ಕೆ ಬಿದ್ದು ಸಂಭವಿಸಿದ ಭೀಕರ ದುರಂತದಲ್ಲಿ ಕನಿಷ್ಠ ಮೂವರು ಯುವಕರು ಮೃತಪಟ್ಟು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಯುವಕರು ಬೊಲೆರೋ ಕ್ಯಾಂಪರ್ ನಲ್ಲಿ ನಾನ್ ಖಾರಿಯಿಂದ ಧನವಾಲಿ ಗ್ರಾಮಕ್ಕೆ ತೆರಳುತ್ತಿದ್ದಾಗ ಧೋನಾ ಗ್ರಾಮದ ಬಳಿ ಈ ದುರಂತ ಸಂಭವಿಸಿತು.
ಸುದ್ದಿ ತಿಳಿದೊಡನೆಯೇ ಸಹಾಯಕ ಎಸ್ಐ ಚಮನ್ ನೇಗಿ ಅವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ಮೃತರನ್ನು ಆಶಿಶ್ ಅಲಿಯಾಸ್ ರಾಮ್ ಲಾಲ್ (25), ಸುರೇಂದರ್ (30) ಮತ್ತು ದಲೀಪ್ ಕುಮಾರ್ (26) ಎಂದು ಗುರುತಿಸಲಾಗಿದ್ದು ಇವರೆಲ್ಲರೂ ಧನವಾಲಿ ಗ್ರಾಮದವರಾಗಿದ್ದಾರೆ.
ಗಾಯಾಳುಗಳಾದ ಸುರೇಶ್, ನೀರಜ್ ಕುಮಾರ್, ಸುಂದರ್ ಮತ್ತು ಹೇಮಚಂದ್ ಅವರನ್ನು ನಾಂಖಾರಿಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಾಲಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!