ಕೇರಳ: ಮೀನುಗಾರಿಕೆ ಬೋಟಿಗೆ ಅಪರಿಚಿತ ಹಡಗು ಢಿಕ್ಕಿ: 3 ಬೆಸ್ತರ ಸಾವು
Team Udayavani, Aug 7, 2018, 12:09 PM IST
ಕೊಚ್ಚಿ : ಕೇರಳದ ತೃಶ್ಶೂರು ಜಿಲ್ಲೆಯ ಚೆತ್ತುವಾ ಕರಾವಳಿಯ ದೂರ ಸಮುದ್ರದಲ್ಲಿ ಅಪರಿಚಿತ ಹಡಗೊಂದು ಮೀನುಗಾರಿಕೆ ಬೋಟಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಕನಿಷ್ಠ ಮೂವರು ಮೀನುಗಾರರು ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.
ಇಂದು ನಸುಕಿನ 3.30ರ ಹೊತ್ತಿಗೆ ನಡೆದ ಈ ಘಟನೆಯಲ್ಲಿ ಇನ್ನೂ ಕೆಲ ಮೀನುಗಾರರು ಗಾಯಗೊಂಡರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೋಟಿನಲ್ಲಿ 15 ಮಂದಿ ಮೀನುಗಾರರು ಇದ್ದರು. ಇವರು ಎರ್ನಾಕುಲಂ ಜಿಲ್ಲೆಯ ಮುನಂಬಾಮ್ ಪ್ರದೇಶದವರಾಗಿದ್ದು ಚೆತ್ತುವಾ ಕರಾವಳಿಯ ದೂರ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದರು.
ಮೀನುಗಾರಿಕೆ ಬೋಟಿಗೆ ಢಿಕ್ಕಿ ಹೊಡೆದ ನಾವೆಯು ಅಲ್ಲಿಂದ ಮುಂದಕ್ಕೆ ಹೋಗಿದೆ. ಕೇರಳ ಮೀನುಗಾರಿಕಾ ಸಚಿವ ಜೆ ಮರ್ಸಿಕುಟ್ಟಿ ಅಮ್ಮ ಅವರು ಟಿವಿ ಚ್ಯಾನಲ್ ಗೆ ನೀಡಿರುವ ಹೇಳಿಕೆಯಲ್ಲಿ “ಆರಂಭಿಕ ಮಾಹಿತಿಗಳ ಪ್ರಕಾರ ಮೂವರು ಮೀನುಗಾರರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ಕೋಸ್ಟ್ ಗಾರ್ಡ್ ಮತ್ತು ನೌಕಾ ಪಡೆಯನ್ನು ಜಾಗೃತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ಎದುರು ನೋಡಲಾಗುತ್ತಿದೆ.
ಕಳೆದ ಜೂನ್ 7ರಂದು ವಿದೇಶೀ ನಾವೆಯೊಂದು ಮೀನುಗಾರಿಕಾ ಬೋಟಿ ಢಿಕ್ಕಿ ಹೊಡೆದಿದ್ದ ಘಟನೆಯಲ್ಲಿ ಇಬ್ಬರು ಮೀನುಗಾರರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ