ತಮಿಳುನಾಡು: ಧಾರಾಕಾರ ಮಳೆಗೆ 3 ಮನೆ ಕುಸಿದು ಬಿದ್ದು 15 ಮಂದಿ ಸಾವು
Team Udayavani, Dec 2, 2019, 11:57 AM IST
ಚೆನ್ನೈ:ಹಿಂದೂ ಮಹಾಸಾಗರ ಮತ್ತು ಅರಬ್ಬಿ ಸಮುದ್ದರ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕೇರಳದಲ್ಲಿ ವರುಣನ ಆರ್ಭಟ ಆರಂಭವಾಗಿದೆ. ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಮೆಟ್ಟೂರುಪಾಳ್ಯಂನ ನಾಡೂರ್ ಕಣ್ಣಪ್ಪನ್ ಲೇಔಟ್ ನಲ್ಲಿ ಮನೆ ಹಾಗೂ ಕಂಪೌಂಡ್ ಗೋಡೆ ಕುಸಿದು 15 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಧಾರಾಕಾರ ಮಳೆಗೆ ಮೂರು ಮನೆಗಳು ಕುಸಿದು ಬಿದ್ದಿದ್ದು, ಈವರೆಗೆ ಅವಶೇಷಗಳಡಿ ಸಿಲುಕಿದ್ದ 12 ಶವಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿಯಲ್ಲಿ ಸೋಮವಾರ ಎಲ್ಲ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಚೆನ್ನೈನಲ್ಲಿ ನೂರಾರು ಮನೆಗಳಿಗೆ ನೀರು ನುಗ್ಗಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ