
ಹಪ್ಪಳ ಕೇಳಿದ್ದಕ್ಕಾಗಿ ಮದುವೆ ಮಂಟಪದಲ್ಲಿ ಗಲಾಟೆ: ಮೂವರಿಗೆ ಗಾಯ
15 ಮಂದಿ ವಿರುದ್ದ ಪ್ರಕರಣ ದಾಖಲು: 1.5 ಲಕ್ಷ ರೂ ನಷ್ಟ
Team Udayavani, Aug 31, 2022, 1:29 PM IST

ಕೊಚ್ಚಿ: ಮದುವೆ ಸಮಾರಂಭದಲ್ಲಿ ಊಟ ಮಾಡುವ ವೇಳೆ ಹೆಚ್ಚುವರಿಯಾಗಿ ಹಪ್ಪಳ ಕೇಳಿದ್ದಕ್ಕೆ ಭಾರಿ ಗಲಾಟೆ ನಡೆದಿದ್ದು, ಮೂವರು ಗಾಯಗೊಂಡಿರುವ ಘಟನೆ ಕೇರಳದ ಹರಿಪಾದದಲ್ಲಿ ನಡೆದಿದೆ.
ಮದುವೆ ಹಾಲ್ ಮಾಲೀಕ ಮುರಳೀಧರನ್ (74) ಮತ್ತು ಅತಿಥಿಗಳಾದ ಜೋಹಾನ್ (21) ಮತ್ತು ಹರಿ (21) ಗಾಯಗೊಂಡವರು.
ಘಟನೆಯ ಪರಿಣಾಮ ಮದುವೆ ಹಾಲ್ನಲ್ಲಿ ಟೇಬಲ್ಸ್, ಕುರ್ಚಿಗಳು, ಪಿಠೋಪಕರಣಗಳಿಗೆ ಹಾನಿಯಾಗಿದ್ದು, ಅಂದಾಜು 1.5 ಲಕ್ಷ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ವಿವರ: ಈ ಘಟನೆ ಭಾನುವಾರ ನಡೆದಿದ್ದು, ಊಟದ ವೇಳೆ ವರನ ಕಡೆಯವರು ಎರಡನೇ ಬಾರಿಗೆ ಹಪ್ಪಳ ಕೇಳಿದ್ದಾರೆ. ಆಗ ಬಡಿಸುವವರು ಹಪ್ಪಳ ಕೊಡಲು ನಿರಾಕರಿಸಿದ್ದಾರೆ. ಇದು ಎರಡು ಗುಂಪುಗಳ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾಗ್ವಾದ ಹೊಡೆದಾಟಕ್ಕೂ ತಿರುಗಿ, ಕಲ್ಯಾಣ ಮಂಟಪದಲ್ಲಿ ಎರಡು ಗುಂಪಿನವರು ಬಡಿದಾಡಿಕೊಂಡಿದ್ದಾರೆ.
ಇದನ್ನೂ ಓದಿ:ನಿವೃತ್ತಿ ಘೋಷಿಸಿದ ನ್ಯೂಜಿಲ್ಯಾಂಡ್ ನ ಖ್ಯಾತ ಆಲ್ ರೌಂಡರ್ ಕಾಲಿನ್ ಡಿ ಗ್ರ್ಯಾಂಡ್ಹೋಮ್
ಘಟನೆ ಕರೀಲಂಕುಳಂಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು 15 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆಗೆ ಕಾರಣಕರ್ತರಾದವನ್ನು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪತ್ತೆಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರಿಗೆ ವಂಚನೆ ಪ್ರಕರಣ: 69.65 ಕೋ.ರೂ. ಆಸ್ತಿ ಜಪ್ತಿ

ಗೋ ಫಸ್ಟ್ ವಿಮಾನಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ

ನನ್ನನ್ನು ಒತ್ತೆಯಲ್ಲಿ ಇರಿಸಲಾಗಿದೆ: ಫ್ರೆಂಚ್ ನಟಿ ಮೇರಿಯನ್ನೆ ಆರೋಪ

ಸಂಸ್ಕೃತವೇಕೆ ದೇಶದ ಅಧಿಕೃತ ಭಾಷೆಯಾಗಬಾರದು?: ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ

ಟಿಪ್ಪು ಸುಲ್ತಾನ್ ಉದ್ಯಾನದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
