ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ : ಮೂವರು ಭಕ್ತರ ಸಾವು, ಇಬ್ಬರಿಗೆ ಗಾಯ
Team Udayavani, Aug 8, 2022, 9:46 AM IST
ರಾಜಸ್ಥಾನ : ಪುರಾಣ ಪ್ರಸಿದ್ಧ ಖತು ಶ್ಯಾಮ್ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆ ಕಾಲ್ತುಳಿತ ಸಂಭವಿಸಿ ಮೂರು ಮಂದಿ ಸಾವನ್ನಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಸೋಮವಾರ ಮುಂಜಾನೆ ಐದು ಗಂಟೆಯ ಸುಮಾರಿಗೆ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ಮಂದಿ ಭಕ್ತರು ಸೇರಿದ್ದರು ಈ ವೇಳೆ ಭಕ್ತರಿಂದ ನೂಕು ನುಗ್ಗಲು ಪ್ರಾರಂಭಗೊಂಡು ಕಾಲ್ತುಳಿತ ಸಂಭವಿಸಿದೆ, ಈ ವೇಳೆ ಮೂವರು ಸಾವನ್ನಪ್ಪಿದ್ದಾರೆ ಅಲ್ಲದೆ ಇಬ್ಬರು ಗಾಯಗೊಂಡಿದ್ದು ಅವರನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ ಶುಭದಿನವಾದ ಹಿನ್ನೆಲೆಯಲ್ಲಿ ದೇವಸ್ಥಾನದ ಹೊರಗೆ ಮುಂಜಾನೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು ದೇವಾಲಯದ ಬಾಗಿಲು ತೆರೆಯುತ್ತಿದ್ದಂತೆ, ಭಕ್ತರ ನೂಕು ನುಗ್ಗಲು ಹೆಚ್ಚಾಗತೊಡಗಿದೆ ಈ ವೇಳೆ ಕಾಲ್ತುಳಿತ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸುವ ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಬಂದು ಭಕ್ತರನ್ನು ನಿಯಂತ್ರಿಸಿದ್ದಾರೆ.
ಇದನ್ನೂ ಓದಿ : ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ : ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ