ಸುರಕ್ಷಾ ಕ್ರಮಗಳಿಲ್ಲದೆ ಕಾರ್ಖಾನೆಯ ಗ್ಯಾಸ್ ಟ್ಯಾಂಕ್ ನ ಒಳಗೆ ಇಳಿದು ಮೂವರು ಕಾರ್ಮಿಕರು ಸಾವು
Team Udayavani, Mar 28, 2021, 1:36 PM IST
ನವದೆಹಲಿ: ಯಾವುದೇ ವಿಧವಾದ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳದೆ ಕಾರ್ಖಾನೆಯ ಗ್ಯಾಸ್ ಟ್ಯಾಂಕ್ ನ ಒಳಗೆ ಇಳಿದ ಪರಿಣಾಮ ಮೂರು ಜನ ಕಾರ್ಮಿಕರು ಸಾವನಪ್ಪಿರುವ ಘಟನೆ ಅಂಬರ್ನಾಥ್ ಪ್ರದೇಶದ ರಾಸಾಯನಿಕ ಕಂಪನಿಯೊಂದರಲ್ಲಿ ನಡೆದಿದೆ.
ಈ ಕುರಿತಾಗಿ ಮಾಹಿತಿ ನೀಡಿರುವ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (MIDC) ಕಾರ್ಮಿಕರು ಗ್ಯಾಸ್ ಟ್ಯಾಂಕ್ ನ ಒಳಗೆ ಇಳಿಯುವ ಸಮಯದಲ್ಲಿ ಯಾವುದೇ ವಿಧವಾದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಈ ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ ಎಂದು ತಿಳಿಸಿದೆ.
ಗುತ್ತಿಗೆದಾರ ವ್ಯಕ್ತಿಯು ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಸೌಲಭ್ಯಗಳನ್ನು ನೀಡದೆ ಗ್ಯಾಸ್ ಟ್ಯಾಂಕ್ ಒಳಗೆ ಇಳಿಸಿದ್ದು, ಅಪಾಯಕಾರಿ ಗ್ಯಾಸ್ ಸೇವನೆಯಿಂದಾಗಿ ಇವರು ಸಾವನಪ್ಪಿದ್ದಾರೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಮಾರು 30 ಅಡಿ ಆಳವಿರುವ ಈ ಟ್ಯಾಂಕ್ ಒಳಗೆ ಕಾರ್ಮಿಕರು ಇಳಿದಿದ್ದು, ಕೆಲವು ಘಂಟೆಗಳ ಬಳಿಕ ಕಾವಲುಗಾರನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕಾರ್ಮಿರನ್ನು ನೋಡಿದ್ದಾರೆ. ಆ ಬಳಿಕವೂ ಆತ ತನ್ನ ಮೇಲಿನ ಹಲವು ಅಧಿಕಾರಿಗಳಿಗೆ ವಿಷಯವನ್ನು ತಿಳಿಸಲು ಮುಂದಾಗಿದ್ದು, ಇದರಿಂದ ಇನ್ನೂ ಎರಡು ಗಂಟೆಗಳಷ್ಟು ಸಮಯ ವ್ಯರ್ಥವಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.
ಇದಾದ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ವ್ಯಕ್ತಿಗಳನ್ನು ಗ್ಯಾಸ್ ಟ್ಯಾಂಕ್ ನಿಂದ ಹೊರಕ್ಕೆ ತೆಗೆದಿದ್ದಾರೆ. ಆದರೆ ಅಷ್ಟರಲ್ಲೇ ಈ ಮೂವರು ಮೃತಪಟ್ಟಿದ್ದರು ಎಂದು ವರದಿ ತಿಳಿಸಿದೆ.
ಈ ವ್ಯಕ್ತಿಗಳ ಕುರಿತಾದ ಹೆಚ್ಚಿನ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಪೊಲೀಸರು ಈ ಕುರಿತಾಗಿ ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ