ಶೋಪಿಯಾನ್ ನಲ್ಲಿ ಎನ್ಕೌಂಟರ್: ಪಂಡಿತ್ ಹತ್ಯೆಯಲ್ಲಿ ಭಾಗಿಯಾದವ ಸಹಿತ ಮೂವರು ಉಗ್ರರ ಹತ್ಯೆ
Team Udayavani, Dec 20, 2022, 8:51 AM IST
ಶ್ರೀನಗರ: ಮೂವರು ಲಷ್ಕರ್ ಎ ತೋಯ್ಬಾದ ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿಗಳು ಎನ್ ಕೌಂಟರ್ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಶೋಪಿಯಾನ್ ನಲ್ಲಿ ಮಂಗಳವಾರ (ಡಿ.20 ರಂದು) ನಡೆದಿದೆ ಎಂದು ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಈ ಎನ್ಕೌಂಟರ್ ನಡೆದಿದೆ.
ಮೂವರರಲ್ಲಿ ಇಬ್ಬರನ್ನು ಗುರುತಿಸಲಾಗಿದ್ದು, ಶೋಪಿಯಾನ್ ಮೂಲದ ಉಗ್ರ ಕಾಶ್ಮೀರಿ ಪಂಡಿತ್ ಕೃಷ್ಣ ಪುರಾಣ ಅವರ ಹತ್ಯೆಯಲ್ಲಿ ಭಾಗಿಯಾದ ಲತೀಫ್ ಲೋನ್ ಮತ್ತೊಬ್ಬ ಅನಂತನಾಗ್ನ ಉಮರ್ ನಜೀರ್ ಎಂದು ಗುರುತಿಸಲಾಗಿದೆ. 1 ಎಕೆ 47 ರೈಫಲ್ ಮತ್ತು 2 ಪಿಸ್ತೂಲನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಕಾಶ್ಮೀರ ಎಡಿಜಿಪಿ ಹೇಳಿದ್ದಾರೆ.
ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹುಡುಕಾಟ ಆರಂಭಿಸಲಾಗಿತ್ತು. ಬಳಿಕ ಹುಡುಕಾಟ ಕಾರ್ಯಚರಣೆ ಎನ್ ಕೌಂಟರ್ ಗೆ ತಿರುಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Shopian, J&K | Encounter underway between security forces and terrorists, 3 LeT terrorists killed at Munjh Marg area
(Visuals deferred by unspecified time) pic.twitter.com/ky2KqbDNbm
— ANI (@ANI) December 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ