ಕಾರಿನೊಳಗೆ 3 ಮೃತದೇಹ ಪತ್ತೆ; ಉದ್ಯಮಿ, ಪತ್ನಿ ಹಾಗೂ ಪುತ್ರಿ ಕೊಲೆ? ಜೀವನ್ಮರಣದಲ್ಲಿ ಪುತ್ರ
ಪುತ್ರ ಶೌರ್ಯ(10ವರ್ಷ) ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ
Team Udayavani, Jan 1, 2020, 6:21 PM IST
ಮಥುರಾ: ದೆಹಲಿ ಮೂಲದ ಉದ್ಯಮಿ, ಪತ್ನಿ ಹಾಗೂ ಮಗಳ ಮೃತದೇಹ ಕಾರಿನೊಳಗೆ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಯುಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಸ ವರ್ಷದ ಸಂಭ್ರಮಾಚರಣೆ ತೆರಳಿದ್ದ ದೆಹಲಿ ಮೂಲದ ಉದ್ಯಮಿ ತನಗೆ ತಾನು ಗುಂಡು ಹೊಡೆದುಕೊಳ್ಳುವ ಮೊದಲು ಪತ್ನಿ ಹಾಗೂ ಮಗಳಿಗೆ ಕಾರಿನೊಳಗೆ ಗುಂಡಿಟ್ಟು ಹತ್ಯೆಗೈದಿರುವುದಾಗಿ ವರದಿ ತಿಳಿಸಿದೆ. ಕಾರಿನೊಳಗೆ ಗಂಭೀರವಾಗಿ ಗಾಯಗೊಂಡಿರುವ ಮಗ ಪತ್ತೆಯಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಉದ್ಯಮಿ ನೀರಜ್ ಅಗರ್ವಾಲ್, ಪತ್ನಿ ನೇಹಾ (35ವರ್ಷ), ಪುತ್ರಿ ಧನ್ಯಾ(6ವರ್ಷ) ಮೃತದೇಹ ಕಾರಿನ ಹಿಂಭಾಗದ ಸೀಟಿನಲ್ಲಿದ್ದು, ಪುತ್ರ ಶೌರ್ಯ(10ವರ್ಷ) ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ ಎಂದು ವರದಿ ತಿಳಿಸಿದೆ.
ಯುಮುನಾ ಎಕ್ಸ್ ಪ್ರೆಸ್ ವೇನಲ್ಲಿ ಪಹರೆ ನಡೆಸುತ್ತಿದ್ದ ಪೊಲೀಸರು ಆಗಮಿಸಿದ ವೇಳೆ ಈ ಘಟನೆ ಪತ್ತೆಯಾಗಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯದ ದೀರ್ಘಾವಧಿ ವಿಚಾರಣೆಯಿಂದ ನೀರಜ್ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆಂದು ದೂರಲಾಗಿದೆ.
ಘಟನೆಯ ಹಿಂದೆ ಆತ್ಮಹತ್ಯೆ ಮತ್ತು ಕೊಲೆಯ ಎರಡು ರೀತಿ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಎಕೆ ಮೀನಾ ತಿಳಿಸಿದ್ದಾರೆ. ತನ್ನ ಮಗ ಯವತ್ತೂ ಇಂತಹ ಅಪರಾಧ ಎಸಗಿಲ್ಲ. ಇದೊಂದು ವಿರೋಧಿಗಳು ನಡೆಸಿದ ಹತ್ಯೆ ಎಂದು ನೀರಜ್ ತಂದೆ ದಿನೇಶ್ ಚಂದ್ರ ಅಗರ್ವಾಲ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ