Lok Sabha; ಡಿ.ಕೆ. ಸುರೇಶ್ ಸೇರಿ ಮೂವರು ಸಂಸದರು ಅಮಾನತು:ಸಂಖ್ಯೆ 146ಕ್ಕೇರಿಕೆ
ಇಂಡಿಯಾ ಮೈತ್ರಿಕೂಟದ ಸಂಸದರಿಂದ ಪ್ರತಿಭಟನಾ ಮೆರವಣಿಗೆ
Team Udayavani, Dec 21, 2023, 7:00 PM IST
ಹೊಸದಿಲ್ಲಿ: ಡಿ.ಕೆ. ಸುರೇಶ್ ಸೇರಿ ಕಾಂಗ್ರೆಸ್ ನ ಮೂವರು ಸಂಸದರನ್ನು ಗುರುವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.ದೀಪಕ್ ಬೈಜ್, ನಕುಲ್ ನಾಥ್ ಅವರನ್ನೂ ಅಮಾನತು ಮಾಡಲಾಗಿದ್ದು, ಅಮಾನತುಗೊಂಡಿರುವ ಪ್ರತಿಪಕ್ಷಗಳ ಒಟ್ಟು ಸದಸ್ಯರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.
ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿ ಮತ್ತು ಘೋಷಣೆಗಳನ್ನು ಕೂಗಿದ ಕಾರಣಕ್ಕೆ ವಿಪಕ್ಷಗಳ ಸಂಸದರನ್ನು ಡಿಸೆಂಬರ್ 14 ರಿಂದ ಅಮಾನತುಗೊಳಿಸಲಾಗುತ್ತಿದೆ.
ಗುರುವಾರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಪ್ರತಿಭಟನೆ ನಡೆಸದಂತೆ ಮೂವರು ಕಾಂಗ್ರೆಸ್ ಸಂಸದರಿಗೆ ಎಚ್ಚರಿಕೆ ನೀಡಿದ್ದರು. ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗುತ್ತಿರುವುದು ಕೇಳಿಸಿತು. ಪ್ರಶ್ನೋತ್ತರ ಅವಧಿ ಮುಗಿದ ಕೂಡಲೇ ಸ್ಪೀಕರ್ ಪ್ರತಿಭಟನಾನಿರತ ಸದಸ್ಯರಿಗೆ ಎಚ್ಚರಿಕೆ ನೀಡಿ, ಮೂವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಿದರು.
ಡಿಸೆಂಬರ್ 4 ರಂದು ಆರಂಭವಾದ ಅಧಿವೇಶನದಲ್ಲಿ ಡಿಸೆಂಬರ್ 14 ರಂದು 14 ಸಂಸದರನ್ನು, ಸೋಮವಾರ 78, ಮತ್ತು ಮಂಗಳವಾರ 49 ಸಂಸದರನ್ನು ಅಮಾನತುಗೊಳಿಸಲಾಗಿದೆ
ವಿಪಕ್ಷಸಂಸದರ ಪ್ರತಿಭಟನೆ
ಗುರುವಾರ, ಇಂಡಿಯಾ ಮೈತ್ರಿಕೂಟದ ಸಂಸದರು ಗುರುವಾರ ಸಂಸತ್ತಿನಿಂದ ದೆಹಲಿಯ ವಿಜಯ್ ಚೌಕ್ಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರ ಹಾಕಿದರು.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸದನದೊಳಗೆ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಮಾತನಾಡದೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ವಿಶೇಷ ಹಕ್ಕು ಉಲ್ಲಂಘಿಸಿದ್ದಾರೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ