Tragedy: ಮಕ್ಕಳ ಕಳ್ಳರೆಂದು ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಹಲ್ಲೆ
Team Udayavani, Jan 13, 2024, 9:44 AM IST
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಗುರುವಾರ ಸಂಜೆ ಥಳಿಸಿದೆ. ಘಟನೆಯು ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದ್ದು ಮಕ್ಕಳ ಕಳ್ಳರೆಂದು ಶಂಕಿಸಿ ಗುಂಪೊಂದು ಸಾಧುಗಳ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ.
ಏನಿದು ಘಟನೆ: ಉತ್ತರ ಪ್ರದೇಶದ ಬರೇಲಿ ನಿವಾಸಿಗಳಾದ ವೃದ್ಧ ಸಂತ ಮತ್ತು ಇಬ್ಬರು ಯುವ ಸಂತರು ಬಾಡಿಗೆ ಕಾರಿನಲ್ಲಿ ಗಂಗಾಸಾಗರಕ್ಕೆ ಹೋಗುತ್ತಿದ್ದರು. ಬಂಕುರಾದಿಂದ ಕಾಶಿಪುರ-ಬಂಕೂರ ರಸ್ತೆ ಮೂಲಕ ಗಂಗಾಸಾಗರ ಕಡೆಗೆ ಹೋಗಬೇಕಿತ್ತು. ಕಾಶೀಪುರದ ಗೌರಂಗಡಿಯಲ್ಲಿ ಸಂತರಿಗೆ ಕೆಲವರು ಸ್ವಲ್ಪ ಹಣವನ್ನು ದಾನ ಮಾಡಿದ್ದಾರೆ. ಅದೇ ರೀತಿ ಮುಂದಿರುವ ಇಟ್ಟಿಗೆ ಕಾರ್ಖಾನೆ ಮಾಲೀಕರು ಹೆಚ್ಚಿನ ದಾನ ಧರ್ಮವನ್ನು ಮಾಡುತ್ತಾರೆ ಅಲ್ಲಿಗೆ ಹೋಗಿ ಎಂದು ಹೇಳಿದ್ದಾರೆ ಆದರೆ ವಿಳಾಸ ಸರಿಯಾಗಿ ಗೊತ್ತಿರದ ಕಾರಣ ರಸ್ತೆಯಲ್ಲಿ ಹೋಗುತಿದ್ದ ಯುವಕರಲ್ಲಿ ಇಟ್ಟಿಗೆ ಕಾರ್ಖಾನೆ ಎಲ್ಲಿ ಎಂದು ಹಿಂದಿಯಲ್ಲಿ ಕೇಳಿದ್ದಾರೆ ಆದರೆ ಅಲ್ಲಿಯ ಜನಕ್ಕೆ ಹಿಂದಿ ಬಾರದೇ ಇರುವುದರಿಂದ ತಪ್ಪಾಗಿ ಗ್ರಹಿಸಿದ ಯುವಕರು ಮಕ್ಕಳ ಕಳ್ಳರೆಂದು ಅನುಮಾನ ಪಟ್ಟು ಗ್ರಾಮದ ಜನರನ್ನು ಒಟ್ಟು ಮಾಡಿದ್ದಾರೆ.
ಈ ವೇಳೆ ಗ್ರಾಮಸ್ಥರು ಸಾಧುಗಳನ್ನು ಮಕ್ಕಳ ಕಳ್ಳರೆಂದು ಶಂಕಿಸಿ ಸಾಧುಗಳನ್ನು ಕಾಳಿ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿ ಥಳಿಸಿದ್ದಾರೆ ಅಲ್ಲದೆ ವಾಹನವನ್ನೂ ಧ್ವಂಸಗೊಳಿಸಿದರು.
ಈ ನಡುವೆ ಆ ಗ್ರಾಮದ ಹಲವು ಯುವಕರು ಮೂವರು ಸಾಧುಗಳನ್ನು ರಕ್ಷಣೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಇದಾದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಮೂವರು ಸಾಧುಗಳನ್ನು ರಕ್ಷಣೆ ಮಾಡಿ ಠಾಣೆಗೆ ಕರೆದುಕೊಂಡು ಹೋಗಿ ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಅವರು ಗಂಗಾಸಾಗರ ಮೇಳಕ್ಕೆ ತೆರಳುತ್ತಿರುವುದು ಸತ್ಯವೆಂದು ತಿಳಿಯಲಾಗಿದೆ ಬಳಿಕ ಪೊಲೀಸರು ಗಾಯಗೊಂಡ ಸಾಧುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಕಳುಹಿಸಿಕೊಟ್ಟಿದ್ದಾರೆ.
ಬಿಜೆಪಿ ಆಕ್ರೋಶ:
ಇತ್ತ ಸಾಧುಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವಿಚಾರ ಗೊತ್ತಾಗುತ್ತಿದ್ದಂತೆ ಪಶ್ಚಿಮ ಬಂಗಾಳ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಟ್ವೀಟ್ ಮೂಲಕ ಮಮತಾ ಸರಕಾರದ ವಿರುದ್ಧ ಕಿಡಿಕಾರಿದ್ದು ಪಶ್ಚಿಮ ಬಂಗಾಳದ ಆಡಳಿತದಲ್ಲಿ ಷಹಜಹಾನ್ ಶೇಖ್ನಂತಹ ಭಯೋತ್ಪಾದಕರಿಗೆ ರಕ್ಷಣೆ ಸಿಗುತ್ತದೆ. ಇಲ್ಲಿ ಸಾಧುಗಳನ್ನು ಬಹಿರಂಗವಾಗಿ ಕೊಲ್ಲುವ ಪ್ರಯತ್ನಗಳು ನಡೆಯುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಹಿಂದೂ ಆಗಿರುವುದೇ ದೊಡ್ಡ ಅಪರಾಧ ಎಂದು ಬರೆದುಕೊಂಡಿದ್ದಾರೆ.
Absolutely shocking incident reported from Purulia in West Bengal. In a Palghar kind lynching, sadhus traveling to Gangasagar for Makar Sankranti, were stripped and beaten by criminals, affiliated with the ruling TMC.
In Mamata Banerjee’s regime, a terrorist like Shahjahan Sheikh… pic.twitter.com/DsdsAXz1Ys— Amit Malviya (@amitmalviya) January 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ