ಮೂವರು ಉಗ್ರರನ್ನು ಎನ್ ಕೌಂಟರ್ ಮೂಲಕ ಸದೆಬಡಿದ ಭದ್ರತಾಪಡೆ: ಕಾರ್ಯಾಚರಣೆಯಲ್ಲಿ 3ಯೋಧರಿಗೂ ಗಾಯ
Team Udayavani, Jul 17, 2020, 8:05 AM IST
ಕುಲ್ಗಾಂ: ಇಂದು ಮುಂಜಾನೆ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ನಗ್ನಾದ್ ಚಿಮ್ಮರ್ ಪ್ರದೇಶದಲ್ಲಿ ಭಾರತೀಯ ಸೇನಾ ಪಡೆಯು ಎನ್ ಕೌಂಟರ್ ಮೂಲಕ ಮೂವರು ಉಗ್ರರನ್ನು ಸದೆಬಡೆದಿದೆ. ಕಾರ್ಯಾಚರಣೆಯಲ್ಲಿ ಮೂವರು ಯೋಧರು ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹತ್ಯೆಯಾದ ಉಗ್ರರ ಗುರುತು ಪತ್ತೆಯಾಗಿಲ್ಲವಾಗಿದ್ದು, ಇನ್ನೂ ಹಲವು ಉಗ್ರರು ಅಡಗಿರುವ ಮಾಹಿತಿಯಿದ್ದು ಭದ್ರತಾಪಡೆ ಕಾರ್ಯಾಚರಣೆ ಮುಂದುವರೆಸಿದೆ.
ಜಮ್ಮು ಕಾಶ್ಮೀರ ಪೊಲೀಸರು, ಭಾರತೀಯ ಸೇನಾ ಪಡೆ, ಸಿಆರ್ ಪಿಎಫ್ ಪಡೆಗಳು ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದು ಜಂಟಿ ಕಾರ್ಯಾಚರಣೆ ಆರಂಭಿಸಿದ್ದು ಮೂವರು ಉಗ್ರರನ್ನು ಎನ್ ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದೆ.
ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಫೈರಿಂಗ್ ಆರಂಭಿಸಿದ್ದರಿಂದ, ಭದ್ರತಾ ಪಡೆಗಳು ಕೂಡ ಸೂಕ್ತ ಪ್ರತ್ಯುತ್ತರ ನೀಡಿದ್ದವು. ಈ ವೇಳೆ ಮೂವರು ಯೋಧರಿಗೂ ಕೂಡ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ವರ್ಷಾರಂಭದಿಂದ ಇಲ್ಲಿಯವರೆಗೂ ಸುಮಾರು 131 ಉಗ್ರರನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್