ಮುಂಗಾರಿನಲ್ಲಿ 30 ಮಸೂದೆ ಪಾಸ್‌

1952ರ 27 ವಿಧೇಯಕಗಳ ದಾಖಲೆ ಮುರಿತ

Team Udayavani, Aug 4, 2019, 6:05 AM IST

x-50

ನವದೆಹಲಿ: ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿದ ಹೆಗ್ಗಳಿಕೆಗೆ ಸಂಸತ್‌ನ ಮುಂಗಾರು ಅಧಿವೇಶನ ಸಾಕ್ಷಿಯಾಗಿದೆ.

ಜೂ.17 ರಂದು ಶುರುವಾದ ಸಂಸತ್‌ ಅಧಿವೇಶನದಲ್ಲಿ ಒಟ್ಟು 30 ಮಸೂದೆಗಳು ಪಾಸ್‌ ಆಗಿವೆ. ಲೋಕಸಭೆಯಲ್ಲಿ 30 ಮಸೂದೆಗಳು ಅನುಮೋದನೆ ಪಡೆದಿದ್ದರೆ, ರಾಜ್ಯಸಭೆಯಲ್ಲಿ 25 ಮಸೂದೆಗಳಿಗೆ ಒಪ್ಪಿಗೆ ಸಿಕ್ಕಿದೆ.

ಆಡಳಿತ ಪಕ್ಷಕ್ಕೆ ಮೇಲ್ಮನೆಯಲ್ಲಿ ಸರಿಯಾದ ಬಹುಮತ ಇಲ್ಲದಿದ್ದರೂ, ವಿಪಕ್ಷಗಳನ್ನು ಮನವೊಲಿಕೆ ಮಾಡಿ ಮಸೂದೆಗಳಿಗೆ ಒಪ್ಪಿಗೆ ಪಡೆದ ಕೀರ್ತಿಯೂ ಆಡಳಿತ ಪಕ್ಷಕ್ಕೆ ಸಂದಿದೆ.

ವಿಶೇಷವೆಂದರೆ, 1952ರಲ್ಲಿ ಮಾತ್ರ ಅಧಿವೇಶನವೊಂದರಲ್ಲಿ ಈ ಪ್ರಮಾಣದ ಮಸೂದೆಗಳು ಅನುಮೋದನೆ ಪಡೆದಿದ್ದವು. ಜವಾಹರ್‌ ಲಾಲ್ ನೆಹರು ಅವರು ಆಗ ಪ್ರಧಾನಿಯಾಗಿದ್ದು, ಒಟ್ಟು 27 ಮಸೂದೆಗಳಿಗೆ ಅಂಗೀಕಾರ ಸಿಕ್ಕಿತ್ತು. ಇದನ್ನು ಬಿಟ್ಟರೆ, ಈಗಲೇ ಈ ಪ್ರಮಾಣದ ಮಸೂದೆಗಳು ಪಾಸ್‌ ಆಗಿವೆ.

ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ ಅವರು, ಆಗಸ್ಟ್‌ 7ರ ಒಳಗೆ ಉಳಿದ ಮಸೂದೆಗಳಿಗೂ ಅನುಮೋದನೆ ಪಡೆಯಲು ಯತ್ನಿಸುತ್ತೇವೆ. ಸಂಸತ್‌ನ ಇತಿಹಾಸದಲ್ಲಿ ಹೊಸ ಅಧ್ಯಾಯ ಶುರು ಮಾಡುತ್ತೇವೆ ಎಂದು ಗುರುವಾರ ಹೇಳಿದ್ದರು.

ಪ್ರತಿಪಕ್ಷಗಳ ಆಕ್ಷೇಪ: ತರಾತುರಿಯಲ್ಲಿ ಮಸೂದೆಗಳು ಪಾಸ್‌ ಆಗಿ ಹೋಗುತ್ತಿರುವ ಬಗ್ಗೆ ಪ್ರತಿಪಕ್ಷಗಳ ನಾಯಕರು ತೀವ್ರ ಆಕ್ಷೇಪವೆತ್ತಿದ್ದಾರೆ. ಇದುವರೆಗೆ ಈ ಅಧಿವೇಶನದಲ್ಲಿ ಯಾವುದೇ ಮಸೂದೆಗಳು ಆಯ್ಕೆ ಸಮಿತಿಗೆ ಹೋಗಿಲ್ಲ ಎಂಬುದು ಈ ನಾಯಕರ ಆಕ್ಷೇಪ. ಈ ಬಗ್ಗೆ ರಾಜ್ಯಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್‌ ಮತ್ತು ಟಿಎಂಸಿ ನಾಯಕ ಡೆರಿಕ್‌ ಒ ಬ್ರಿಯಾನ್‌ ತಮ್ಮ ಆಕ್ರೋಶವನ್ನೂ ಹೊರಹಾಕಿದ್ದರು.

ಕ್ರಿಯಾಶೀಲ ಸ್ಪೀಕರ್‌: ಈ ಪ್ರಮಾಣದ ಮಸೂದೆಗಳು ಪಾಸ್‌ ಆಗುವುದರಲ್ಲಿ ಸ್ಪೀಕರ್‌ ಓಂ ಬಿರ್ಲಾ ಅವರ ಪಾತ್ರವೂ ಹೆಚ್ಚಿದೆ ಎಂದು ಕೇಂದ್ರದ ಸಚಿವರೊಬ್ಬರು ಹೇಳಿದ್ದಾರೆ. ಬೆಳಗ್ಗೆ 9.30ಕ್ಕೇ ಸಂಸತ್‌ಗೆ ಆಗಮಿಸುವ ಸ್ಪೀಕರ್‌ ಅವರು, ಅಂದು ಮಂಡನೆಯಾಗಬೇಕಾಗಿರುವ ಮಸೂದೆಗಳ ಮಾಹಿತಿ ಪಡೆಯುತ್ತಾರೆ. ಬಳಿಕ ಅತ್ಯಂತ ಸುಲಲಿತವಾಗಿ ಸದನವನ್ನು ನಡೆಸಿಕೊಂಡು ಹೋಗುತ್ತಾರೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಸಲೀಸು
ಬಿಜೆಪಿ ನೇತೃತ್ವದ ಎನ್‌ಡಿಎಗೆ ಲೋಕಸಭೆಯಲ್ಲಿ 352 ಸದಸ್ಯರ ಬಲವುಂಟು. ಹೀಗಾಗಿ ಇಲ್ಲಿ ಯಾವುದೇ ಮಸೂದೆ ಪಾಸ್‌ ಆಗಲು ಪ್ರತಿಪಕ್ಷಗಳ ನೆರವು ಬೇಕಾಗಿಲ್ಲ. ಹೀಗಾಗಿಯೇ ಇಲ್ಲಿ 30 ಮಸೂದೆಗಳು ಅನುಮೋದನೆ ಪಡೆದುಕೊಂಡಿವೆ. ಆದರೆ, ರಾಜ್ಯಸಭೆಯಲ್ಲಿ ಆಡಳಿತ ಪಕ್ಷಕ್ಕೆ ಬಹುಮತ ಇಲ್ಲ. ಇಲ್ಲಿ ಪ್ರತಿಪಕ್ಷಗಳಿಗೇ ಹೆಚ್ಚಿನ ಸ್ಥಾನವುಂಟು. ಇಂಥ ಪರಿಸ್ಥಿತಿಯಲ್ಲೂ ಪ್ರತಿಪಕ್ಷ ನಾಯಕರ ಜತೆಗೆ ಮಾತುಕತೆ ನಡೆಸಿ 25 ಮಸೂದೆಗಳಿಗೆ ಒಪ್ಪಿಗೆ ಪಡೆಯಲಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.