Manipur 40 ಬಂಡುಕೋರರ ಹತ್ಯೆ, ಹಲವರ ಬಂಧನ: ಸಿಎಂ ಬಿರೇನ್ ಸಿಂಗ್
ಶಾ ಭೇಟಿಗೆ ಮುಂಚಿತವಾಗಿ ಸೇನಾ ಮುಖ್ಯಸ್ಥ ಇಂಫಾಲ್ಗೆ
Team Udayavani, May 28, 2023, 6:22 PM IST
ಇಂಫಾಲ: ರಾಜ್ಯದಲ್ಲಿ ಹಿಂಸಾತ್ಮಕ ಘರ್ಷಣೆಯ ಸಂದರ್ಭದಲ್ಲಿ ನಾಗರಿಕರ ವಿರುದ್ಧ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಕನಿಷ್ಠ 40ಮಂದಿ ಬಂಡುಕೋರರು ವಿವಿಧ ಪ್ರದೇಶಗಳಲ್ಲಿ ಹತರಾಗಿದ್ದಾರೆ, ಹಲವರನ್ನು ಬಂಧಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಎನ್ ಬಿರೇನ್ ಸಿಂಗ್ ಅವರ ಹೇಳಿಕೆಯು ಮಣಿಪುರ ಸರ್ಕಾರವು ಮೇ 31 ರವರೆಗೆ ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮತ್ತಷ್ಟು ವಿಸ್ತರಿಸಿದ ನಂತರ ಬಂದಿದೆ. ಮೇ 3 ರಂದು ಆದಿವಾಸಿಗಳು ಮತ್ತು ಬುಡಕಟ್ಟು ಅಲ್ಲದವರ ನಡುವಿನ ಘರ್ಷಣೆಯ ನಂತರ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು.
ಗುಡ್ಡಗಾಡು ಜಿಲ್ಲೆಗಳಲ್ಲಿ ‘ಬುಡಕಟ್ಟು ಐಕ್ಯತಾ ಮೆರವಣಿಗೆ’ ಆಯೋಜಿಸಿದ ಬಳಿಕ ಈ ಘರ್ಷಣೆ ಆರಂಭವಾಗಿದೆ ಪರಿಶಿಷ್ಟ ಪಂಗಡ (ಎಸ್ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಬೇಡಿಕೆಯನ್ನು ಪ್ರತಿಭಟನಾಕಾರರು ವಿರೋಧಿಸಿದ್ದರು. ಘರ್ಷಣೆ ಪೀಡಿತ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಮೂರು ದಿನಗಳ ಪ್ರಸ್ತಾವಿತ ಭೇಟಿಗೆ ಮುಂಚಿತವಾಗಿ ಭಾನುವಾರ (ಮೇ 28) ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇಂಫಾಲ್ಗೆ ಆಗಮಿಸಿದ್ದಾರೆ.
ಮಣಿಪುರದಲ್ಲಿ ಘರ್ಷಣೆ ನಡೆದು ಸುಮಾರು ಒಂದು ತಿಂಗಳಾದರೂ ರಾಜ್ಯದಲ್ಲಿ ಅಶಾಂತಿ ಇನ್ನೂ ಮುಂದುವರೆದಿದೆ. ಗುರುವಾರ ಮುಂಜಾನೆ, ಮಣಿಪುರದ ಬಿಷ್ಣುಪುರದಲ್ಲಿ ಭುಗಿಲೆದ್ದ ಹೊಸ ಹಿಂಸಾಚಾರದಲ್ಲಿ ಒಬ್ಬರು ಸಾವನ್ನಪ್ಪಿದ್ದು ಮತ್ತು ಇನ್ನೊಬ್ಬರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ