ಕಮರಿಗೆ ಉರುಳಿದ ಬಸ್: 35 ಸಾವು
Team Udayavani, Jul 2, 2019, 5:17 AM IST
28 ಆಸನಗಳಿದ್ದ ಮಿನಿ ಬಸ್ನಲ್ಲಿ ಒಟ್ಟು 52 ಪ್ರಯಾಣಿಕರನ್ನು ತುಂಬಿಸಲಾಗಿತ್ತು. ಈ ಬಸ್ ಕೇಶ್ವಾನ್ನಿಂದ ಕಿಶ್ತ್ವಾರ್ಗೆ ತೆರಳುತ್ತಿತ್ತು. ಬೆಳಗ್ಗೆ 7.30ರ ವೇಳೆಗೆ ಕೇಶ್ವಾನ್- ಥಕ್ರಾಯಿ ರಸ್ತೆಯಲ್ಲಿ ಸಾಗುತ್ತಿದ್ದಂತೆ, ಏಕಾಏಕಿ ಬಸ್ ಸ್ಕಿಡ್ ಆಗಿ, ಕಮರಿಯೊಂದಕ್ಕೆ ಉರುಳಿತು. ಘಟನೆಯಲ್ಲಿ 35 ಮಂದಿ ಸಾವಿಗೀಡಾದರೆ, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು, ಭದ್ರತಾ ಪಡೆಗಳು ಹಾಗೂ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾದ ಕಾರಣ ಹಲವರ ಜೀವ ಉಳಿದಿದೆ. ಕೆಲವರನ್ನು ಹೆಲಿಕಾಪ್ಟರ್ ಮೂಲಕ ಮೇಲೆತ್ತಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಪಾಲ ಸತ್ಯಪಾಲ್ ಮಲಿಕ್ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನೂ ರಾಜ್ಯಪಾಲರು ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್