ನಿಲ್ಲದ ಮಹಾಮಳೆಗೆ ಮತ್ತೆ 35 ಜನ ಮೃತ್ಯು

ಉತ್ತರ ಕಾಶಿಯಲ್ಲಿ ಮೇಘಸ್ಫೋಟಕ್ಕೆ 17 ಸಾವು

Team Udayavani, Aug 20, 2019, 5:45 AM IST

w-45

ಹೊಸದಿಲ್ಲಿ: ಪೂರ್ವ, ಉತ್ತರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ತನ್ನ ರುದ್ರ ನರ್ತನವನ್ನು ಮುಂದುವರಿಸಿದ್ದು, ಹಿಮಾಚಲ ಪ್ರದೇಶ, ಉತ್ತರಾ ಖಂಡ್‌ಗಳಲ್ಲಿ ಒಟ್ಟು 35 ಜನರು ಸಾವಿಗೀಡಾಗಿದ್ದಾರೆ. ಗುಜರಾತ್‌ನ ಕಛ…ನಲ್ಲಿ ಲಘು ಭೂಕಂಪವಾಗಿದೆ. ಅಪಾಯಮಟ್ಟ ಮೀರಿ ಹರಿಯುತ್ತಿರುವ ಜಮ್ಮು ಕಾಶ್ಮೀರದ ತಾವಿ ನದಿಯಲ್ಲಿ ಸಿಲುಕಿದ್ದ ನಾಲ್ವರನ್ನು ರಕ್ಷಿಸಲಾಗಿದೆ. ಮಹಾರಾಷ್ಟ್ರ, ಪಂಜಾಬ್‌, ಉತ್ತರ ಪ್ರದೇಶಗಳ ಮತ್ತಷ್ಟು ಪ್ರಾಂತ್ಯಗಳು ಜಲಾವೃತವಾಗಿವೆ. ರಾಜಸ್ಥಾನದಲ್ಲಿ ಮತ್ತಷ್ಟು ಮಳೆಯಾಗುವ ಸಂಭವವಿದೆ.

ಯಮುನೆ ದಡದಲ್ಲಿ ಪ್ರವಾಹ ಭೀತಿ: ಭಾರೀ ಮಳೆಯಿಂದಾಗಿ ಯಮುನಾ ನದಿ, ಅಪಾಯಮಟ್ಟ ಮೀರಿ ಹರಿಯುತ್ತಿದೆ. ಹಾಗಾಗಿ, ಆ ನದಿಯು ಸಾಗುವ ದಿಲ್ಲಿ, ಹರ್ಯಾಣ, ಪಂಜಾಬ್‌ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ದಿಲ್ಲಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ, 2,120 ನಿರಾಶ್ರಿತರ ಶಿಬಿರಗಳನ್ನು ತೆರೆಯ ಲಾಗಿದ್ದು, ರಾಜ್ಯದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಶಿಬಿರಗಳಿಗೆ ತೆರಳುವಂತೆ ಅಲ್ಲಿನ ಸಿಎಂ ಅರವಿಂದ್‌ ಕೇಜ್ರಿ ವಾಲ್‌, ಜನರಲ್ಲಿ ಮನವಿ ಮಾಡಿದ್ದಾರೆ.

ಹರಿಯಾಣದಲ್ಲಿ ಹೈ ಅಲರ್ಟ್‌: ಹರಿಯಾ ಣದಲ್ಲಿರುವ ಹತಿನಿ ಕುಂಡ್‌ ಅಣೆಕಟ್ಟಿನಿಂದ ಅಪಾರ ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ಅದರಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸೇನೆಯನ್ನು ಸನ್ನದ್ಧಗೊಳಿಸಲಾಗಿದೆ. ಐಐಟಿ ರೋಪರ್‌ನಲ್ಲಿರುವ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

250 ಹಳ್ಳಿಗಳು ಜಲಾವೃತ: ಪಂಜಾಬ್‌ನಲ್ಲಿ, ರೋಪರ್‌, ನವಾಶಹರ್‌, ಜಲಂಧರ್‌, ಕಪುರ್ತಲಾ, ಲೂಧಿಯಾನಾ, ತರ್ನ್ ತರಣ್‌, ಮೋಗಾ, ಫಿರೋಜ್‌ಪುರ ಜಿಲ್ಲೆಗಳ 250ಕ್ಕೂ ಹೆಚ್ಚು ಹಳ್ಳಿಗಳು ಜಲಾವೃತವಾಗಿವೆ. ರವಿವಾರ ಸಂಜೆ ಹೊತ್ತಿಗೆ 209 ಹಳ್ಳಿಗಳ ಜನರನ್ನು ತೆರವು ಗೊಳಿಸಲಾಗಿದೆ.

574 ಕೋಟಿ ರೂ. ನಷ್ಟ: ಹಿಮಾಚಲದ ಪ್ರದೇಶದಲ್ಲಿ ಮಳೆಯಿಂದಾಗಿ, 574 ಕೋಟಿ ರೂ.ಗಳಷ್ಟು ಹಾನಿಯಾಗಿದೆ ಎಂದು ಮುಖ್ಯ ಮಂತ್ರಿ ಜೈರಾಮ್‌ ಠಾಕೂರ್‌ ತಿಳಿಸಿದ್ದಾರೆ. ಸೋಮವಾರ ಒಂದೇ ದಿನ 102.5 ಮಿ.ಮೀ.ಗಳಷ್ಟು ಮಳೆ ಯಾಗಿ, ರಾಜ್ಯದಲ್ಲೇ ದಾಖಲೆಯಾಗಿದೆ.

ಮೇಘಸ್ಫೋಟಕ್ಕೆ 17 ಬಲಿ: ಉತ್ತರ ಪ್ರದೇಶದ ಕಾಶಿ ಜಿಲ್ಲೆಯ ಮೋರಿ ಬ್ಲಾಕ್‌ನಲ್ಲಿ ಮೇಘಸ್ಫೋಟ ಉಂಟಾಗಿ, 17 ಜನರು ಸಾವಿಗೀಡಾಗಿದ್ದಾರೆ. 18 ಜನರು ನಾಪತ್ತೆ ಯಾಗಿದ್ದು, ಅವರಿಗಾಗಿ ಶೋಧ ನಡೆದಿದೆ. ಜಲಾವೃತ ಪ್ರದೇಶಗಳಿಂದ ಇಬ್ಬರನ್ನು ಡೆಹ್ರಾಡೂನ್‌ಗೆ ಏರ್‌ಲಿಫ್ಟ್ ಮಾಡಲಾಗಿದೆ. ಶಾಲೆಗಳಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಿಲಾಗಿದೆ. ಉತ್ತರ ಪ್ರದೇಶದಲ್ಲಿ ಹರಿಯುತ್ತಿರುವ ಗಂಗಾ, ಯಮುನಾ, ಘಾಗ್ರಾ ನದಿಗಳು ಉಕ್ಕಿ ಹರಿಯುತ್ತಿದ್ದು, ಗಂಗಾ ನದಿಯು ಬದೌನ್‌, ಗರ್ಮುಕ್ತೇಶ್ವರ, ನರೌದಾ, ಫ‌ರುಕಾಬಾದ್‌ನಲ್ಲಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

ಮೀನುಗಾರರ ರಕ್ಷಣೆ
ಜಮ್ಮು ಜಿಲ್ಲೆಯಲ್ಲಿ ತಾವಿ ನದಿಯ ಪ್ರವಾಹದ ನಡುವ ಸಿಲುಕಿದ್ದ ನಾಲ್ವರು ಮೀನುಗಾರರನ್ನು ಭಾರತೀಯ ವಾಯುಪಡೆಯ (ಐಎಎಫ್) ಸಿಬಂದಿ, ಯಶಸ್ವಿ ಕಾರ್ಯಾಚರಣೆ ಮೂಲಕ ಏರ್‌ಲಿಫ್ಟ್ ಮಾಡಿದ್ದಾರೆ. ಮೀನುಗಾರರು ನದಿಯ ನಡುವೆ ಸಿಲುಕಿದ ವಿಚಾರ ಮಧ್ಯಾಹ್ನ 12 ಗಂಟೆಗೆ ಐಎಎಫ್ಗೆ ಲಭ್ಯವಾಗಿತ್ತು. ಕೇವಲ ಅರ್ಧ ಗಂಟೆಯಲ್ಲಿ ಸ್ಥಳಕ್ಕೆ ತಲುಪಿದ ವಾಯುಪಡೆ ಸಿಬಂದಿ, ಯಶಸ್ವಿಯಾಗಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿತು ಎಂದು ಜಮ್ಮುವಿನಲ್ಲಿ ವಾಯುಪಡೆಯ ಕಾರ್ಯಾಚರಣೆಗಳ ಉಸ್ತುವಾರಿ ಹೊತ್ತಿರುವ ಸಂದೀಪ್‌ ಸಿಂಗ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.