ಒಂದೇ ವಾರದಲ್ಲಿ 3ನೇ ರ್ಯಾಲಿ!
Team Udayavani, Feb 8, 2019, 12:40 AM IST
ಕೋಲ್ಕತಾ: ಲೋಕಸಭೆ ಚುನಾವಣೆ ಸಮೀಪಿ ಸುತ್ತಿದ್ದಂತೆ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ಮಧ್ಯದ ಸಂಘರ್ಷ ತಾರಕಕ್ಕೇರಿದೆ. ಪ.ಬಂಗಾಳದಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನವನ್ನೂ ನಡೆಸಿದೆ.
ಒಂದು ವಾರದಲ್ಲಿ ಪ್ರಧಾನಿ ಮೋದಿ 2 ರ್ಯಾಲಿ ನಡೆಸಿದ್ದು, ಶುಕ್ರವಾರ ಮತ್ತೂಂದು ರ್ಯಾಲಿಯನ್ನು ಜಲ್ಪಾಯುರಿಯಲ್ಲಿ ನಡೆಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಪ.ಬಂಗಾಳದ 42 ಕ್ಷೇತ್ರಗಳ ಪೈಕಿ 2ರಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ 23 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹಾಕಿಕೊಂಡಿದೆ.
ಪದಕ ವಾಪಸ್?: ಪ.ಬಂಗಾಳ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಪ್ರಕರಣದಲ್ಲಿ ಮಮತಾ ಜೊತೆಗೆ ಧರಣಿ ಕುಳಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಈ ಅಧಿಕಾರಿಗಳಿಗೆ ನೀಡಲಾಗಿರುವ ರಾಷ್ಟ್ರಪತಿ ಪದಕಗಳನ್ನು ಹಿಂಪಡೆಯುವುದು ಹಾಗೂ ಕೇಂದ್ರ ಸರಕಾರದ ಹುದ್ದೆಗಳಿಗೆ ಬಡ್ತಿ ನಿರ್ಬಂಧಿಸುವುದು ಸಹಿತ ಇತರ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.