Bihar journalist: ಮನೆಯಲ್ಲೇ ಬಿಹಾರ ಪತ್ರಕರ್ತನ ಗುಂಡಿಕ್ಕಿ ಹತ್ಯೆ: ನಾಲ್ವರು ವಶಕ್ಕೆ
Team Udayavani, Aug 19, 2023, 9:31 AM IST
ಬಿಹಾರ: ಶುಕ್ರವಾರ ಮುಂಜಾನೆ ಅರಾರಿಯಾ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರನ್ನು ಮನೆಯಲ್ಲೇ ಗುಂಡಿಕ್ಕಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಬಿಹಾರ ಪೊಲೀಸರು ತಿಳಿಸಿದ್ದಾರೆ.
ಪತ್ರಕರ್ತನನ್ನು ವಿಮಲ್ ಯಾದವ್ ಎಂದು ಗುರುತಿಸಲಾಗಿದ್ದು, ದೈನಿಕ್ ಜಾಗರಣದಲ್ಲಿ ಉದ್ಯೋಗಿಯಾಗಿದ್ದರು. ರಾಣಿಗಂಜ್ನಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ನಾಲ್ವರು ಆತನ ಎದೆಗೆ ಗುಂಡು ಹಾರಿಸಿ ಶುಕ್ರವಾರ ಹತ್ಯೆಗೈದಿದ್ದರು.
ಈ ಕುರಿತು ಮಾತನಾಡಿದ ಹಿರಿಯ ಫಿಲೊಸ್ ಅಧಿಕಾರಿ ಬಿಮಲ್ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಎಂಟು ಮಂದಿ ಕೊಲೆ ಆರೋಪಿಗಳನ್ನು ಹೆಸರಿಸಲಾಗಿದ್ದು, ಈ ಪೈಕಿ ನಾಲ್ವರನ್ನು ಇಂದು ಮುಂಜಾನೆ ವಿಚಾರಣೆಗೊಳಪಡಿಸಲಾಗಿದೆ. ಆರೋಪಿಗಳು 2019 ರಲ್ಲಿ ವಿಮಲ್ ಯಾದವ್ ಅವರ ಸಹೋದರನನ್ನು ಸಹ ಕೊಲೆ ಮಾಡಿದ್ದರು. ಆ ಪ್ರಕರಣದಲ್ಲಿ ಬಿಮಲ್ ಏಕೈಕ ಸಾಕ್ಷಿಯಾಗಿದ್ದರು ಮತ್ತು ಅವರ ಸಾಕ್ಷ್ಯವನ್ನು ನಾಶಪಡಿಸಲು ಈ ಹತ್ಯೆ ನಡೆಸಿದರೇ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ ಎಂದಿದ್ದಾರೆ.
ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ವಿಫಲವಾದ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಅರಾರಿಯಾದಲ್ಲಿ ನಡೆದ ಪತ್ರಕರ್ತನ ಹತ್ಯೆಯನ್ನು ಖಂಡಿಸಿದ ಮುಖ್ಯಮಂತ್ರಿ ನಿತೀಶ್, “ಸುದ್ದಿ ಬಂದ ನಂತರ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ನಾನು ಅಧಿಕಾರಿಗಳಿಗೆ ಆದೇಶಿಸಿದ್ದೇನೆ” ಎಂದು ಹೇಳಿದರು.
ಇದನ್ನೂ ಓದಿ: Jammu: ಗುಜುರಿ ಅಂಗಡಿಯಲ್ಲಿ ಭೀಕರ ಸ್ಫೋಟ, ಬಾಲಕ ಸೇರಿ 3 ಮಂದಿ ಮೃತ್ಯು, 11 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ