ದ್ವಿಚಕ್ರ ವಾಹನಗಳಿಗೆ ಕಾರು ಢಿಕ್ಕಿ : ಮೇಲ್ಸೇತುವೆಯಿಂದ ಕೆಳಗೆ ಬಿದ್ದು ನಾಲ್ವರ ಸಾವು
Team Udayavani, Sep 10, 2022, 9:44 AM IST
ನಾಗ್ಪುರ : ನಾಗ್ಪುರದ ಮೇಲ್ಸೇತುವೆಯಲ್ಲಿ ಕಾರೊಂದು ಎರಡು ದ್ವಿಚಕ್ರವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ನಾಗ್ಪುರದ ಸಕರ್ದಾರಾ ಮೇಲ್ಸೇತುವೆಯಲ್ಲಿ ಈ ಅವಘಡ ಸಂಭವಿಸಿದ್ದು, ಕಾರು ಎರಡು ಬೈಕುಗಳಿಗೆ ಢಿಕ್ಕಿ ಹೊಡೆದು ಹೆದ್ದಾರಿ ತಡೆಗೋಡೆಗೆ ಢಿಕ್ಕಿ ಹೊಡೆದು ನಿಂತಿದೆ. ಘಟನೆಯಲ್ಲಿ ಎರಡು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮೇಲ್ಸೇತುವೆಯಿಂದ ಸುಮಾರು 80 ಅಡಿಗಳಷ್ಟು ಕೆಳಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರು ಚಾಲಕನ ಅತಿವೇಗ ಹಾಗೂ ನಿರ್ಲಕ್ಷದಿಂದ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ‘ಲಕ್ಕಿಮ್ಯಾನ್’ ಚಿತ್ರ ವಿಮರ್ಶೆ: ದೇವರ ಆಟದಲ್ಲಿ ಲಕ್ಕಿ ಮ್ಯಾನ್ ಮಿಂಚು