Himachal Pradesh: ಕಂದಕಕ್ಕೆ ಉರುಳಿದ ಕಾರು; 4 ಮಂದಿ ಮೃತ್ಯು
Team Udayavani, May 16, 2023, 3:54 PM IST
ಸಿರ್ಮೌರ್ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕಾರೊಂದು ಕಂದರಕ್ಕೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ 5:30 ಕ್ಕೆ ಸಿರ್ಮೌರ್ ಜಿಲ್ಲೆಯ ರಾಜ್ಗಢ್ ಲಾನಾ ಚೇತಾ ಮಾರ್ಗ್ನ ಪಾಬೋರ್ ಬಳಿ ಕಾರೊಂದು ಕಮರಿಗೆ ಬಿದ್ದ ಪರಿಣಾಮ ನಾಲ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸಂಗ್ರಾಹ್ ಮುಖೇಶ್ ಕುಮಾರ್ ತಿಳಿಸಿದ್ದಾರೆ.
ಮೃತರನ್ನು ಕಮಲ್ ರಾಜ್ (40), ಜೀವನ್ ಸಿಂಗ್ (63) ಸುಮಾ ದೇವಿ (54) ಮತ್ತು ರೇಖಾ (25) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಮಹಿಳೆ ಆಸ್ಪತ್ರೆಗೆ ತಲುಪುವ ಮೊದಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.