Tragic: ಮೂರು ಅಂತಸ್ತಿನ ಅಕ್ಕಿ ಗಿರಣಿ ಕಟ್ಟಡ ಕುಸಿದು ನಾಲ್ವರು ಮೃತ್ಯು
ಕೆಲಸ ಮುಗಿಸಿ ಮಲಗಿದ್ದ ವೇಳೆ ನಡೆದ ದುರಂತ
Team Udayavani, Apr 18, 2023, 9:37 AM IST
ಚಂಡಿಗಢ: ಮೂರು ಅಂತಸ್ತಿನ ಅಕ್ಕಿ ಗಿರಣಿಯ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟು 20 ಮಂದಿ ಗಾಯಗೊಂಡಿರುವ ಘಟನೆ ಹರ್ಯಾಣದ ಕರ್ನಾಲ್ ಜೆಲ್ಲೆಯ ತಾರೋರಿಯಲ್ಲಿ ಸೋಮವಾರ-ಮಂಗಳವಾರದ ಮಧ್ಯರಾತ್ರಿಯಲ್ಲಿ ನಡೆದಿರುವುದು ವರದಿಯಾಗಿದೆ.
ಹರ್ಯಾಣದ ಕರ್ನಾಲ್ ಜೆಲ್ಲೆಯ ತಾರೋರಿಯಲ್ಲಿರುವ ಮೂರು ಅಂತಸ್ತಿನ ಶಿವಶಕ್ತಿ ರೈಸ್ ಮಿಲ್ ಕುಸಿದು ಬಿದ್ದಿರುವ ಕಟ್ಟಡ. ಮಿಲ್ ನಲ್ಲಿ ರಾತ್ರಿ ಪಾಳಿಯ ಕೆಲಸವನ್ನು ಮಾಡಿ 100 ಹೆಚ್ಚಿನ ಕಾರ್ಮಿಕರು ಮಲಗಿದ್ದರು. ಈ ವೇಳೆ ಕಟ್ಟಡ ಕುಸಿದು ಬಿದ್ದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: Sand Mining: ಮರಳು ಮಾಫಿಯಾ ಪರಿಶೀಲಿಸಲು ತೆರಳಿದ್ದ ಅಧಿಕಾರಿಗಳನ್ನೇ ಅಟ್ಟಾಡಿಸಿ ಹಲ್ಲೆಗೈದರು
ಕಟ್ಟಡ ಕುಸಿದ ಪರಿಣಾಮ 4 ಜನರು ಮೃತಪಟ್ಟಿದ್ದು, 20 ಮಂದಿಗೆ ಗಾಯವಾಗಿದೆ ಎನ್ನಲಾಗಿದೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಇದುವರೆಗೆ 100 ಮಂದಿಯನ್ನು ರಕ್ಷಿಸಲಾಗಿದ್ದು, ಅವಶೇಷದಡಿ ಇನ್ನು ಹಲವರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.
ಕಟ್ಟಡದಲ್ಲಿ ಕೆಲ ದೋಷಗಳು ಇರುವುದು ಕಂಡು ಬಂದಿದೆ.ಇದರ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗುವುದು.ಕಟ್ಟಡ ಮಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆಂದು ಕರ್ನಾಲ್ ನ ಜಿಲ್ಲಾಧಿಕಾರಿ ಅನೀಶ್ ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ