ಕಾಶ್ಮೀರದಲ್ಲಿ ಮುಂದುವರಿದ ಅಟ್ಟಹಾಸ: ಭದ್ರತಾ ಪಡೆಯ ಎನ್ ಕೌಂಟರ್ ಗೆ ನಾಲ್ವರು ಉಗ್ರರು ಬಲಿ
ಸೆಂಟ್ರಲ್ ರಿಸರ್ವ್ ಪೊಲೀಸ್ ಪೋರ್ಸ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು
Team Udayavani, Apr 22, 2020, 11:14 AM IST
Representative Image
ಜಮ್ಮು-ಕಾಶ್ಮೀರ:ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಉಗ್ರರು ಹತ್ಯೆಗೀಡಾಗಿರುವ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ವರದಿ ತಿಳಿಸಿದೆ.
ಝೈನಾಪೋರಾ ಗ್ರಾಮದ ಮೆಲ್ ಹೋರಾ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಜಮ್ಮು-ಕಾಶ್ಮೀರ ಪೊಲೀಸರು, 55ನೇ ರಾಷ್ಟ್ರೀಯ ರೈಫಲ್ಸ್ ಮತ್ತು ಸೆಂಟ್ರಲ್ ರಿಸರ್ವ್ ಪೊಲೀಸ್ ಪೋರ್ಸ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು ಎಂದು ವರದಿ ವಿವರಿಸಿದೆ.
ಕಳೆದ ಒಂದು ತಿಂಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನಡೆಸಿದ ಎನ್ ಕೌಂಟರ್ ನಲ್ಲಿ ಒಟ್ಟು ಆರು ಮಂದಿ ಉಗ್ರರು ಹತ್ಯೆಗೀಡಾದಂತಾಗಿದೆ. ಅಲ್ಲದೇ ಏಪ್ರಿಲ್ 6ರಂದು ಕುಪ್ವಾರ ಜಿಲ್ಲೆಯ ಕೇರಾನ್ ಸೆಕ್ಟರ್ ನಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಯ ಐವರು ಕಮಾಂಡೋಗಳು ಹುತಾತ್ಮರಾಗಿದ್ದರು.
ಭಾರತ ಸೇರಿದಂತೆ ಇಡೀ ಜಗತ್ತು ಕೋವಿಡ್ 19 ವೈರಸ್ ವಿರುದ್ಧ ಹೋರಾಡುತ್ತಿದ್ದರೆ, ಪಾಕಿಸ್ತಾನ ಉಗ್ರರನ್ನು ರಫ್ತು ಮಾಡುವುದರಲ್ಲಿ ತಲ್ಲೀನವಾಗಿದೆ ಎಂದು ಭಾರತೀಯ ಸೇನಾಪಡೆಯ ಮುಖ್ಯಸ್ಥ ನರಾವಣೆ ಆಕ್ರೋಶವ್ಯಕ್ತಪಡಿಸಿದ್ದನ್ನು ನೆನಪಿಸಿಕೊಳ್ಳಬಹುದು. ಗಡಿಭಾಗದಲ್ಲಿ ಸತತವಾಗಿ ಉಗ್ರರ ಉಪಟಳ ಹೆಚ್ಚಾಗಿರುವುದಾಗಿ ಸೇನೆಯ ಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ