ಹುತಾತ್ಮರ ಕುಟುಂಬಕ್ಕೆ 4 ಪಟ್ಟು ಪರಿಹಾರ ಮೊತ್ತ ಏರಿಕೆ
Team Udayavani, Oct 6, 2019, 5:34 AM IST
ಹೊಸದಿಲ್ಲಿ: ಹುತಾತ್ಮರ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಏರಿಕೆ ಮಾಡಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಸೇನೆಯ ದೀರ್ಘಕಾಲದ ಬೇಡಿಕೆ ಈಡೇರಿದಂತಾಗಿದೆ.
ಯುದ್ಧದಲ್ಲಿ ಮಡಿದ ಹುತಾತ್ಮರ ಕುಟುಂಬಕ್ಕೆ ನೀಡಲಾಗುವ ಪರಿಹಾರ ಮೊತ್ತ ನಾಲ್ಕು ಪಟ್ಟು ಹೆಚ್ಚಳವಾಗಿದೆ. ಅಂದರೆ, ಈವರೆಗೆ 2 ಲಕ್ಷ ರೂ. ಇದ್ದ ನೆರವಿನ ಮೊತ್ತ ಈಗ 8 ಲಕ್ಷ ರೂ. ಗೆ ಏರಿಕೆ ಮಾಡಲಾಗಿದೆ. ಅಷ್ಟೇ ಅಲ್ಲ, ಕರ್ತವ್ಯದ ವೇಳೆ ಗಾಯಗೊಂಡವರಿಗೂ ಪರಿಹಾರ ಮೊತ್ತ ಏರಿಕೆಗೆ ನಿರ್ಧರಿಸಲಾಗಿದೆ.
ಪರಿಹಾರ ಮೊತ್ತದ ಏರಿಕೆ ಬೇಡಿಕೆ ಕಳೆದ ಹಲವು ದಿನಗಳಿಂದಲೂ ಚಾಲ್ತಿಯಲ್ಲಿತ್ತು. ಇದಕ್ಕೆ ಸಂಬಂಧಿಸಿದಂತೆ ರಚಿಸಿದ ಸಮಿತಿ ಶಿಫಾರಸಿನ ಹಿನ್ನೆಲೆ ಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈವರೆಗೆ, ಯುದ್ಧದ ವೇಳೆ ಅಸುನೀಗಿದರೆ ಅಥವಾ ಶೇ.60ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯಕ್ಕೆ ಒಳಗಾದರೆ 2 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು.
ಕೌಟುಂಬಿಕ ಪಿಂಚಣಿ, ಸೇನಾ ಸಾಮೂಹಿಕ ವಿಮೆಯಡಿ ಸಿಗುವ ಹಣಕಾಸು ನೆರವು, ಸೇನಾ ಕ್ಷೇಮಾಭಿವೃದ್ಧಿ ನಿಧಿ ಮತ್ತು ಇತರೆ ಪರಿಹಾರ ಮೊತ್ತವಲ್ಲದೆ, ಹೆಚ್ಚುವರಿಯಾಗಿ ಈ ನೆರವನ್ನು ನೀಡಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು