ರೈತರಿಗೆ ನೇರವಾಗಿ ಎಕರೆಗೆ 4 ಸಾವಿರ ನಗದು ಘೋಷಣೆ
Team Udayavani, Jan 3, 2019, 6:47 AM IST
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರೈತರನ್ನು ಮೆಚ್ಚಿಸಲು ಕೇಂದ್ರ ಸರ್ಕಾರ ಪ್ರತಿ ಎಕರೆಗೆ 4 ಸಾವಿರ ರೂ. ನೇರ ನಗದು ಘೋಷಣೆ ಮಾಡುವ ಸಾಧ್ಯತೆಯಿದೆ.ಅಷ್ಟೇ ಅಲ್ಲ, ಪ್ರತಿ ರೈತರಿಗೆ 1 ಲಕ್ಷ ರೂ. ಬಡ್ಡಿ ರಹಿತ ಸಾಲ ಸೌಲಭ್ಯವನ್ನೂ ಇದೇ ವೇಳೆ ಘೋಷಿಸಬಹುದಾಗಿದೆ.
ನೇರ ನಗದು ಪಾವತಿಗಾಗಿ ಸರ್ಕಾರಕ್ಕೆ 2 ಲಕ್ಷ ಕೋಟಿ ರೂ. ಹೊರೆಯಾದರೆ, ಬಡ್ಡಿ ರಹಿತ ಸಾಲಕ್ಕಾಗಿ ಸರ್ಕಾರಕ್ಕೆ 28-30 ಸಾವಿರ ಕೋಟಿ ರೂ.ಹೊರೆಯಾಗಲಿದೆ. ಈಗಾಗಲೇ ರಸಗೊಬ್ಬರಕ್ಕೆ ನೀಡಲಾಗುತ್ತಿರುವ ಸಬ್ಸಿಡಿ ಹಾಗೂ ಇತರ ಸಣ್ಣ ಸ್ಕೀಮ್ಗಳನ್ನು ಇದರಲ್ಲಿಸೇರ್ಪಡೆಗೊಳಿಸುವ ಸಾಧ್ಯತೆಯಿದೆ.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಭಾರಿ ಸೋಲುಂಡ ಹಿನ್ನೆಲೆಯಲ್ಲಿ ರೈತರಿಗಾಗಿ ಯೋಜನೆ ಗಳನ್ನು ಪ್ರಕಟಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಪ್ರಧಾನಿ ಸಚಿವಾಲಯ ಮತ್ತು ನೀತಿ ಆಯೋಗ ಸಭೆ ನಡೆಸಿ ಈ ಯೋಜನೆಯನ್ನು ರೂಪಿಸಿದೆ ಎನ್ನಲಾಗಿದೆ. ಈ ವಾರದಲ್ಲೇ
ಈ ಯೋಜನೆಯನ್ನು ಅಂತಿಮಗೊಳಿ ಸುವ ಸಾಧ್ಯತೆಯಿದೆ. ವಿವಿಧ ಖಾತೆಗಳ ಅಧಿಕಾರಿಗಳೆಲ್ಲರೂ ಒಟ್ಟಾಗಿ ಈ ಯೋಜನೆಯನ್ನು ಅಂತಿಮಗೊಳಿಸುವಂತೆ ಪ್ರಧಾನಿ ಸಚಿವಾಲಯ ಸೂಚಿಸಿತ್ತು.
ಸದ್ಯ ಬೆಳೆ ಸಾಲಕ್ಕೆ ಶೇ. 4 ರ ಬಡ್ಡಿ ವಿಧಿಸಲಾಗುತ್ತಿದೆ. ಆದರೆ ಈ ಹೊಸ ವಿಧದ ಸಾಲಕ್ಕೆ 1 ಲಕ್ಷ ರೂ.ವರೆಗೆ ಬ್ಯಾಂಕ್ಗಳು ಬಡ್ಡಿ ವಿಧಿಸುವಂತಿಲ್ಲ. ಅಲ್ಲದೆ ಎಕರೆಗೆ 50 ಸಾವಿರ ರೂ. ಬಡ್ಡಿ ರಹಿತ ಸಾಲವನ್ನು ನಿಗದಿಪಡಿಸಲಾಗಿದ್ದು, ಒಬ್ಬರ ರೈತರಿಗೆ 1 ಲಕ್ಷ ರೂ.ವರೆಗೆ ನೀಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ