ಗೆಹಲೋಟ್‌ ಸಂಸ್ಕೃತ, ಕನ್ನಡದಲ್ಲಿ ರಾಜೀವ್‌ ಪ್ರಮಾಣ ಸ್ವೀಕಾರ


Team Udayavani, Apr 4, 2018, 9:55 AM IST

Rajya-sabha-3-4.jpg

ಹೊಸದಿಲ್ಲಿ: ಕಳೆದ ತಿಂಗಳ 23ರಂದು ಮುಕ್ತಾಯವಾದ ರಾಜ್ಯಸಭೆ ಚುನಾವಣೆಯಲ್ಲಿ ಜಯಗಳಿಸಿರುವ 58 ಸಂಸದರ ಪೈಕಿ ಮಂಗಳವಾರ 41 ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಶೇಷವೆಂದರೆ, ಕರ್ನಾಟಕದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ರಾಜೀವ್‌ ಚಂದ್ರಶೇಖರ್‌ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದು. ರಾಜ್ಯದವರೇ ಆಗಿರುವ ಎಲ್‌.ಹನುಮಂತಯ್ಯ ಪ್ರಮಾಣ ಸ್ವೀಕರಿಸಲಿಲ್ಲ. ಒಟ್ಟು ಒಂಭತ್ತು ಪ್ರಾದೇಶಿಕ ಭಾಷೆಗಳಲ್ಲಿ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುವ ಸಂಸದರು ಪ್ರಮಾಣ ಸ್ವೀಕರಿಸಿ ಪ್ರಾದೇಶಿಕ ಸೊಗಡು ಮೆರೆದಿದ್ದಾರೆ ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಕೇಂದ್ರ ಸಚಿವ ಥಾವರ್‌ ಚಂದ್‌ ಗೆಹಲೋಟ್‌ ಸಂಸ್ಕೃತದಲ್ಲಿ, ಶಿವಸೇನೆಯ ಅನಿಲ್‌ ದೇಸಾಯಿ ಮರಾಠಿಯಲ್ಲಿ, ಉತ್ತರಾಖಂಡದಿಂದ ಆಯ್ಕೆಯಾದ ಬಿಜೆಪಿ ಸಂಸದ ಅನಿಲ್‌ ಬಲೂನಿ ಹಿಂದಿಯಲ್ಲಿ ಪ್ರಮಾಣ ಸ್ವೀಕರಿಸಿದ್ದಾರೆ. ಉತ್ತರ ಪ್ರದೇಶದ ಎಸ್‌ಪಿಯಿಂದ ಪುನಾಯ್ಕೆಯಾದ ಜಯಾ ಬಚ್ಚನ್‌ ಗೈರಾಗಿದ್ದರು. ಕೇಂದ್ರ ಸಚಿವರಾದ ಮಾನ್ಸುಖ್‌ ಮಾಂಡವ್ಯ (ಗುಜರಾತ್‌), ಜೆ.ಪಿ.ನಡ್ಡಾ (ಹಿಮಾಚಲ ಪ್ರದೇಶ), ಧರ್ಮೇಂದ್ರ ಪ್ರಧಾನ್‌ (ಮಧ್ಯಪ್ರದೇಶ), ರವಿಶಂಕರ ಪ್ರಸಾದ್‌ (ಬಿಹಾರ), ಪ್ರಕಾಶ್‌ ಜಾವಡೇಕರ್‌ (ಮಹಾರಾಷ್ಟ್ರ) ಕೂಡ ಪ್ರಮಾಣ ಸ್ವೀಕರಿಸಿದ್ದಾರೆ. ರಾಜಸ್ಥಾನ, ತೆಲಂಗಾಣ ಮತ್ತು ಒಡಿಶಾದಿಂದ ಆಯ್ಕೆಯಾದ ಸಂಸದರು ಸದಸ್ಯರಾಗಿ ಪ್ರಮಾಣ ಸ್ವೀಕರಿಸಲಿಲ್ಲ. ಬಿಜೆಪಿಯ ಸರೋಜ್‌ ಪಾಂಡೆ ಕಾಲು ಮುರಿದು ಹೋಗಿದ್ದರಿಂದ ಕುಳಿತೇ ಪ್ರಮಾಣ ಸ್ವೀಕರಿಸಲು ಅವಕಾಶ ಕಲ್ಪಿಸಲಾಯಿತು. 

ರಾಜ್ಯಸಭೆ ನಾಯಕರಾಗಿ ಜೇಟ್ಲಿ: ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜ್ಯಸಭೆ ನಾಯಕರಾಗಿ ಪುನರಾಯ್ಕೆಯಾಗಿದ್ದಾರೆ. ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಜೇಟ್ಲಿ ಮತ್ತೆ ಚುನಾಯಿತರಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ.  ಸದನ ಸಮಾವೇಶ ಗೊಳ್ಳುತ್ತಿದ್ದಂತೆಯೇ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ಈ ಬಗೆಗಿನ ಪತ್ರವನ್ನು ಸಭಾಪತಿ ವೆಂಕಯ್ಯ ನಾಯ್ಡುಗೆ ಹಸ್ತಾಂತರಿಸಿದರು. ಆದರೆ ಜೇಟ್ಲಿ ಸದಸ್ಯರಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿರಲಿಲ್ಲ. 

ಶೂನ್ಯ ಕಲಾಪದತ್ತ ಸಂಸತ್‌
ಸತತ 19ನೇ ದಿನವಾದ ಮಂಗಳವಾರವೂ ಲೋಕಸಭೆ, ರಾಜ್ಯಸಭೆಯಲ್ಲಿ ಯಾವುದೇ ರೀತಿಯ ಕಲಾಪ ನಡೆಯಲೇ ಇಲ್ಲ. ಏ.6ರಂದು ಬಜೆಟ್‌ ಅಧಿವೇಶನದ ಎರಡನೇ ಹಂತ ಮುಕ್ತಾಯವಾಗಲಿದೆ. ಎರಡೂ ಸದನಗಳಲ್ಲಿ ವಿವಿಧ ವಿಚಾರಗಳಿಗೆ ಸಂಬಂಧಿಸಿ ವಿವಿಧ ಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಬುಧವಾರಕ್ಕೆ ಕಲಾಪ ಮುಂದೂಡಲಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.