ಥಾಣೆಯಲ್ಲಿ 4,507 ಅಪಾಯಕಾರಿ ಕಟ್ಟಡಗಳು


Team Udayavani, May 10, 2019, 2:18 PM IST

1-eee

ಥಾಣೆ : ನಗರದಲ್ಲಿ ಸುಮಾರು 4,507 ಕಟ್ಟಡಗಳು ಅಪಾಯದ ಸ್ಥಿತಿಯಲ್ಲಿವೆ ಎಂದು ಥಾಣೆ ಮಹಾನಗರ ಪಾಲಿಕೆಯು ನಡೆಸಿದ ಸಮೀಕ್ಷೆ ತಿಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 198 ಕಟ್ಟಡಗಳು ಇಳಿಕೆಯಾಗಿದ್ದು, ಕಳೆದ ಬಾರಿ 4,705 ಕಟ್ಟಡಗಳು ಅಪಾ ಯಕಾರಿ ಎಂದು ಗುರುತಿಸಲ್ಪಟ್ಟಿತ್ತು.

ಮಾನ್ಸೂನ್‌ ಮೊದಲು ಪ್ರತಿವರ್ಷ ನಗರದಲ್ಲಿ ಅಪಾಯಕಾರಿ ಕಟ್ಟಡಗಳ ಸಮೀಕ್ಷೆಯನ್ನು ಥಾಣೆ ಪುರಸಭೆಯು ನಡೆಸುತ್ತಿದ್ದು, ನಾವು ಎಲ್ಲಾ ವಾರ್ಡ್‌ಗಳಿಂದ ಅಪಾಯಕಾರಿ ಕಟ್ಟಡಗಳ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಮೀಕ್ಷೆಯ ಪ್ರಕಾರ ನಗರದಲ್ಲಿ 4,507 ಅಪಾಯಕಾರಿ ಕಟ್ಟಡಗಳಿವೆ. ಅದರಲ್ಲಿ ಸಿ-1 ವರ್ಗದಲ್ಲಿ 103 ಕಟ್ಟಡಗಳು ಅತ್ಯಂತ ಅಪಾಯದ ಸ್ಥಿತಿಯಲ್ಲಿವೆ. ಸಿ-2ಎ ವರ್ಗದಲ್ಲಿರುವ 98 ಕಟ್ಟಡಗಳು ಅಪಾಯಕಾರಿ, ಸಿ-2ಬಿ ಯಲ್ಲಿರುವ 2,297 ಕಟ್ಟಡಗಳು ರಿಪೇರಿಬಲ… ಮತ್ತು ಸಿ-3 ಯಲ್ಲಿರುವ 2,009 ಕಟ್ಟಡಗಳು ಸಣ್ಣ ದುರಸ್ತಿಯ ಹಂತದಲ್ಲಿದೆ ಎಂದು ವರ್ಗಿಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ಅತ್ಯಂತ ಅಪಾಯಕಾರಿ ವಿಭಾಗಗಳಲ್ಲಿನ ಕಟ್ಟಡಗಳ ಸಂಖ್ಯೆ ಹಿಂದಿನ ವರ್ಷಕ್ಕಿಂತ ಅಧಿಕವಾಗಿದ್ದು, ವಿಶೇಷವಾಗಿ ನಾವಾ³ಡಾ ಮತ್ತು ಕೋಪ್ರಿ ಪ್ರದೇಶಗಳಲ್ಲಿದೆ. ಮುಂಬ್ರಾ ಕೂಡ ಅತ್ಯಂತ ಹೆಚ್ಚಿನ ಅಪಾಯಕಾರಿ ಕಟ್ಟಡಗಳನ್ನು ಹೊಂದಿದೆ, ಆದರೂ ಅವುಗಳಲ್ಲಿ ಹೆಚ್ಚಿನವು ದುರಸ್ತಿ ಹಂತದಲ್ಲಿವೆ. ಮುಂಬ್ರಾದಲ್ಲಿ ಅತಿಹೆಚ್ಚು 1,441 ಸಂಖ್ಯೆಯ ಅಪಾಯಕಾರಿ ಕಟ್ಟಡಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ವಾಗ್ಲೆà ಎಸ್ಟೇಟ್‌ನಲ್ಲಿ 1,086 ಅಪಾಯಕಾರಿ ಕಟ್ಟಡಗಳನ್ನು ಹೊಂದಿದೆ. ಸಿ1 ಮತ್ತು ಸಿ2ಎ ವರ್ಗದಲ್ಲಿರುವ ಎಲ್ಲಾ ಕಟ್ಟಡಗಳ ನಿವಾಸಿಗಳನ್ನು ಮೇ 31 ರೊಳಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕೃತ ಮೂಲಗಳು ಹೇಳಿವೆ.

ಲೋಕಮಾನ್ಯ-ಸಾವರ್ಕರ್‌ ನಗರ ವಾರ್ಡ್‌ಗಳು ಹಳೆಯ ಥಾಣೆ ಪ್ರದೇಶವನ್ನು ಹೊಂದಿದ್ದು, ಈ ಪ್ರದೇಶಗಳಲ್ಲಿರುವ ಹೆಚ್ಚಿನ ಕಟ್ಟಡಗಳು ಈಗ 40ರಿಂದ 50 ವರ್ಷಕ್ಕಿಂತಲೂ ಹೆಚ್ಚು ಹಳೆಯದಾಗಿದೆ. ಹಳೆಯ ಕಟ್ಟಡಗಳ ಪುನರಾಭಿವೃದ್ಧಿಗಾಗಿ ಮಹಡಿ ಸ್ಥಳ ಸೂಚ್ಯಂಕ ಬಗ್ಗೆ ಯಾವುದೇ ಸ್ಪಷ್ಟತೆ ಇನ್ನೂ ಇಲ್ಲ, ಇದು ನಾವಾ³ಡಾ, ರಾಮ ಮಾರುತಿ ರಸ್ತೆ, ವಿಷ್ಣು ನಗರ, ಬಿ-ಕ್ಯಾಬಿನ್‌ ಮತ್ತು ಪಂಚಪಕಾಡಿ ಪ್ರದೇಶಗಳಲ್ಲಿನ ಹೆಚ್ಚಿನ ಪುನರಾಭಿವೃದ್ಧಿಗೆ ಕಾರಣವಾಗಿದೆ ಎನ್ನಲಾಗಿದೆ.

ಮಾಲೀಕರು, ಬಾಡಿಗೆದಾರರು ಮತ್ತು ಡೆವಲಪರ್ಗಳ ನಡುವಿನ ಸಂಘರ್ಷದಿಂದಾಗಿ ಹೆಚ್ಚಿನ ಹಳೆಯ ಕಟ್ಟಡಗಳು ಅಪಾಯ ಕಾರಿಯಾಗಿದ್ದು, ಇದಲ್ಲದೆ, ಕಟ್ಟಡಗಳ ನಿವಾಸಿಗಳಿಗೆ ಪರ್ಯಾಯ ವಸತಿ ಕೊರತೆಯಿಂದಾಗಿ ಈ ಪ್ರದೇಶದ ಪುನರಾಭಿವೃದ್ಧಿಗೆ ಸಹ ಸ್ಥಗಿತಗೊಂಡಿದೆ. ನಾವಾ³ಡಾದ ವಾರ್ಡ್‌ ಕಚೇರಿಯ ಪ್ರಕಾರ 46 ಕಟ್ಟಡಗಳ ಸ್ಥಳಾಂತರ ಪ್ರಕ್ರಿಯೆಯು ಈಗಾಗಲೇ ಪ್ರಾರಂಭಗೊಂಡಿದ್ದು, 20 ಕಟ್ಟಡಗಳನ್ನು ಈಗಾಗಲೇ ಖಾಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾವಾ³ಡಾ ನಗರವು 46 ಅತ್ಯಂತ ಅಪಾಯಕಾರಿ ಕಟ್ಟಡಗಳನ್ನು ಹೊಂದಿದ್ದು, ಅದರ ಅನಂತರ ವರ್ತಕ್‌ ನಗರದಲ್ಲಿ 20 ಮತ್ತು ಲೋಕಮಾನ್ಯ ಸಾವರ್ಕರ್‌ ನಗರದಲ್ಲಿ 15 ಅಪಾಯಕಾರಿ ಕಟ್ಟಡಗಳಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮಾನ್ಸೂನ್‌ ಮೊದಲು ಸಿ-1 ಮತ್ತು ಸಿ-2ಎ ವಿಭಾಗದಲ್ಲಿ 200ಕ್ಕೂ ಹೆಚ್ಚಿನ ಕಟ್ಟಡಗಳನ್ನು ಸ್ಥಳಾಂತರಿಸಬೇಕಾಗದ ಅಗತ್ಯವಿದ್ದು, ಸ್ಥಳಾಂತರ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ, ಸಿ-1 ವರ್ಗದ ಎÇÉಾ ಕಟ್ಟಡಗಳನ್ನು ಜೂನ್‌ ಮೊದಲ ವಾರದ ಮೊದಲು ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.