ಬರ ಅನುದಾನ ಕೇಳಿದ್ದು 4700 ಕೋಟಿ ಕೊಟ್ಟಿದ್ದು 1782 ಕೋಟಿ
Team Udayavani, Jan 6, 2017, 3:45 AM IST
ಉದಯವಾಣಿ ದೆಹಲಿ ಪ್ರತಿನಿಧಿ: ಕೇಂದ್ರ ಬರ ಅಧ್ಯಯನ ತಂಡದ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿನ ಬರ ನಿವಾರಣೆಗಾಗಿ 1782.44 ಕೋಟಿ ರೂ. ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ತೀವ್ರ ಬರವಿದ್ದು 4702.54 ಕೋಟಿ ರೂ.ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು.
ಗುರುವಾರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಗೃಹ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ 1782.44 ಕೋಟಿ ರೂ. ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಶೀಘ್ರದಲ್ಲಿಯೇ ಈ ಅನುದಾನದ ಹಣವನ್ನು ರಾಜ್ಯಕ್ಕೆ ಬಿಡುಗಡೆಗೊಳಿಸಲಾಗುವುದು ಎಂದು ಸಮಿತಿ ತಿಳಿಸಿದೆ.
ಗರಿಷ್ಠ ಪರಿಹಾರ:
ರಾಜ್ಯದ ಮನವಿಗೆ ಹೋಲಿಸಿದರೆ ಘೋಷಣೆಯಾದ ಪರಿಹಾರದ ಮೊತ್ತ ಕಡಿಮೆ. ಆದರೆ ಹಿಂದಿನ ಪರಿಹಾರಗಳನ್ನು ಗಮನಿಸಿದರೆ ಈ ಸಲ ಗರಿಷ್ಠ ಪ್ರಮಾಣದ ಅನುದಾನವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದೆ ಎನ್ನಲಾಗಿದೆ.2015-16ರ ಸಾಲಿನಲ್ಲಿ ಬರ ಪರಿಹಾರವಾಗಿ ರಾಜ್ಯವು ಕೇಂದ್ರದಿಂದ 3,830 ಕೋಟಿ ರೂ. ಕೇಳಿತ್ತು. ಆದರೆ ಕೇಂದ್ರ ಸರ್ಕಾರ 1540 ಕೋಟಿ ರೂ. ನೀಡಿತ್ತು.
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾನದಂಡಗಳನ್ನು ಅನ್ವಯಿಸಿ ರಾಜ್ಯಕ್ಕೆ 4702.54 ಕೋಟಿ ರೂ. ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಕೇಂದ್ರ ಸರ್ಕಾರ ಕಳೆದ ನವೆಂಬರ್ ಮೊದಲ ವಾರದಲ್ಲಿ ರಾಜ್ಯದ ಬರ ಪೀಡಿತ ಪ್ರದೇಶಗಳಿಗೆ ತನ್ನ ಆಂತರಿಕ ತಂಡವನ್ನು ಕಳುಹಿಸಿದ್ದು, ಆ ಸಮಿತಿಯ ಅಧ್ಯಯನ ವರದಿಯ ಶಿಫಾರಸ್ಸಿನಂತೆ ಅನುದಾನ ನೀಡಿದೆ.
ಗೃಹ ಸಚಿವಾಲಯದ ಅಧಿಕಾರಿಗಳು ಸೇರಿದಂತೆ ನೀತಿ ಆಯೋಗದ ಉಪ ಮುಖ್ಯಸ್ಥ ಡಾ.ಅರವಿಂದ ಪಾನಗಢಿಯಾ, ಗೃಹ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಮೆಹ್ರಷಿ ಮೊದಲಾದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ನಿರಾಸೆಯಾಗಿದೆ: ಕೃಷ್ಣಬೈರೇಗೌಡ
ಈ ಕುರಿತು ಪ್ರತಿಕ್ರಿಯಿಸಿದ ಕೃಷಿ ಸಚಿವ ಕೃಷ್ಣ ಬೈರೇಗೌಡ, ಕೇಂದ್ರದ ನಿರ್ಧಾರದಿಂದ ರಾಜ್ಯಕ್ಕೆ ತೀವ್ರ ನಿರಾಸೆಯಾಗಿದೆ ಎಂದರು. ಈ ಸಲ ಬರ ಪರಿಹಾರಕ್ಕೆ ಬೇರೆ ಯಾವುದೇ ರಾಜ್ಯಗಳು ಮನವಿ ಮಾಡಿರಲಿಲ್ಲ. ಹೀಗಾಗಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಸಿಗುವ ವಿಶ್ವಾಸವಿತ್ತು. ಕೇಂದ್ರದಿಂದ ಕಡಿಮೆ ಅನುದಾನ ಸಿಗಬಹುದೆಂದು ನಿರೀಕ್ಷಿಸಿ, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಹೆಚ್ಚಿನ ಪರಿಹಾರ ನೀಡುವಂತೆ ಪ್ರಧಾನಿ ಅವರಿಗೂ ಮನವಿ ಮಾಡಿಕೊಂಡಿದ್ದೆವು. ಆದರೆ ನಮ್ಮ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಹೆಚ್ಚಿನ ಪರಿಹಾರಕ್ಕಾಗಿ ಇನ್ನೊಮ್ಮೆ ಪ್ರಧಾನಿ ಅವರನ್ನು ಭೇಟಿ ಮಾಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ ಎಂದು ಅವರು ತಿಳಿಸಿದರು.
ಕೇಂದ್ರ ಸರ್ಕಾರ ಈಗ ಬಿಡುಗಡೆ ಮಾಡಿರುವ ಮೊತ್ತ ಬಹಳ ಕಡಿಮೆಯಾಗಿದ್ದು, ಈ ಹಿಂದೆ ಕೇಳಿದ್ದ ಮೊತ್ತವನ್ನೇ ನೀಡಬೇಕೆಂದು ಮತ್ತೂಮ್ಮೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು.
– ಸಿದ್ದರಾಮಯ್ಯ
ಕಳೆದ ವರ್ಷ ಕೇಂದ್ರ ಸರ್ಕಾರ 1,500 ಕೋಟಿ ರೂ. ಬರ ಪರಿಹಾರ ನೀಡಿದ್ದರೂ, ರಾಜ್ಯ ಸರ್ಕಾರ ಅದನ್ನು ಸಮರ್ಪಕವಾಗಿ ಬಳಿಸಿಕೊಂಡಿಲ್ಲ. ಆದರೂ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುತ್ತೇನೆ.
– ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ