![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
48 ಮಂದಿ ಎಂಪಿ,ಎಂಎಲ್ಎಗಳ ಮೇಲಿವೆ ಮಹಿಳಾ ದೌರ್ಜನ್ಯದ ಕೇಸ್!
Team Udayavani, Apr 19, 2018, 3:07 PM IST
![100.jpg](https://www.udayavani.com/wp-content/uploads/2018/04/19/100-620x354.jpg)
ಹೊಸದಿಲ್ಲಿ: ದೇಶದಲ್ಲಿ ಅತ್ಯಾಚಾರ ಮತ್ತು ಮಹಿಳಾ ದೌರ್ಜನ್ಯದ ವಿರುದ್ಧ ಆಕ್ರೋಶ ತೀವ್ರವಾಗಿದ್ದು ಈ ವೇಳೆ 48 ಜನಪ್ರತಿನಿಧಿಗಳ ಮೇಲೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ ಗಳು ದಾಖಲಾಗಿರುವ ಬಗ್ಗೆ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.
ಅಸೋಸಿಯೇಷನ್ ಫಾರ್ ಡೆಮಾಕ್ರಾಟಿಕ್ ರಿಫಾರ್ಮ್ಸ್(ADR) ಬಹಿರಂಗ ಪಡಿಸಿರುವ ವರದಿಯಲ್ಲಿ ಈ ಕಳವಳಕಾರಿ ಅಂಶ ಬಯಲಾಗಿದ್ದು, ಕಳೆದ 5 ವರ್ಷಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳು 327 ಮಂದಿ ಮಹಿಳಾ ದೌರ್ಜನ್ಯ ಕೇಸ್ ದಾಖಲಾದವರಿಗೆ ಟಿಕೆಟ್ ನೀಡಿದ್ದು, 118 ಮಂದಿ ಪಕ್ಷೇತರವಾಗಿ ಕಣಕ್ಕಿಳಿದಿದ್ದಾರೆ ಎಂದು ವರದಿ ಹೇಳಿದೆ.
ರಾಜ್ಯ ಸಭೆ ಮತ್ತು ಲೋಕಸಭೆಗೂ 40 ಮಂದಿ ಇಂತಹ ಕೇಸ್ ಹೊಂದಿದ್ದವರಿಗೆ ಟಿಕೆಟ್ಗಳನ್ನು ನೀಡಲಾಗಿದೆ. ವಿಧಾನಸಭಾ ಚುನಾವಣೆಗೆ ವಿವಿಧ ಪಕ್ಷಗಳು ಕೇಸ್ ಹೊಂದಿದ್ದ 287 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿವೆ ಎಂದು ವರದಿ ಹೇಳಿದೆ.
ಮಹಾರಾಷ್ಟ್ರದಲ್ಲಿ ಜನಪ್ರತಿನಿಧಿಗಳ ಮೇಲೆ ಗರಿಷ್ಠ ಅಂದರೆ 12 ಮಂದಿಯ ಮೇಲೆ ಮಹಿಳಾ ದೌರ್ಜನ್ಯದ ಕೇಸ್ ಗಳು ದಾಖಲಾಗಿವೆ. ಪಶ್ಚಿಮ ಬಂಗಾಲದಲ್ಲಿ 12 ಮಂದಿ, ಒಡಿಶಾ ಮತ್ತು ಆಂಧ್ರದಲ್ಲಿ ತಲಾ 5 ಮಂದಿಯ ಮೇಲೆ ಮಹಿಳಾ ದೌರ್ಜನ್ಯದ ಪ್ರಕರಣಗಳಿವೆ ಎಂದು ವರದಿ ಹೇಳಿದೆ.
ಮಹಾರಾಷ್ಟ್ರದಲ್ಲಿ ಮಹಿಳಾ ದೌರ್ಜನ್ಯ ಎದುರಿಸುತ್ತಿರುವ 65 ಮಂದಿಗೆ ಟಿಕೆಟ್ ನೀಡಲಾಗಿದ್ದರೆ ಬಿಹಾರದಲ್ಲಿ 62 ಮತ್ತು ಪಶ್ಚಿಮ ಬಂಗಾಲದಲ್ಲಿ 52 ಮಂದಿಗೆ ಟಿಕೆಟ್ ನೀಡಲಾಗಿದೆ ಎಂದು ವರದಿ ಹೇಳಿದೆ.
ಪಕ್ಷಗಳ ಪೈಕಿ ಇಂತಹ ಪ್ರಕರಣ ಹೊಂದಿರುವವರ ಗರಿಷ್ಠ ಸಂಖ್ಯೆ ಬಿಜೆಪಿಯದ್ದಾಗಿದ್ದು, 12 ಮಂದಿಯ ವಿರುದ್ಧ ಪ್ರಕರಣಗಳಿದ್ದು, ಶಿವಸೇನೆಯ 7 ಮಂದಿ, ತೃಣಮೂಲ ಕಾಂಗ್ರೆಸ್ನ 7 ಮಂದಿ ಸಂಸದ, ಶಾಸಕರ ಮೇಲೆ ಪ್ರಕರಣಗಳಿವೆ ಎಂದು ವರದಿ ಹೇಳಿದೆ.
ಬಿಜೆಪಿ ಮಹಿಳಾ ದೌರ್ಜನ್ಯ ಕೇಸ್ ಎದುರಿಸುತ್ತಿರುವ 47 ಮಂದಿಗೆ ಟಿಕೆಟ್ ನೀಡಿದ್ದು, ಬಿಎಸ್ಪಿ 35 ಮಂದಿಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್ 24 ಮಂದಿಗೆ ನೀಡಿದೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.