ಇನ್ನು 5 ಲಕ್ಷದಿಂದ 10 ಲಕ್ಷ ರೂ. ವರೆಗೆ ಶೇ.10 ರಷ್ಟು ತೆರಿಗೆ?

ಮಧ್ಯಮ ವರ್ಗಕ್ಕೆ ಇನ್ನಷ್ಟು ರಿಲೀಫ್ ಸಿಗುವ ಲೆಕ್ಕಾಚಾರ

Team Udayavani, Aug 28, 2019, 6:55 PM IST

tax

– ಕೇಂದ್ರ ಸರಕಾರಕ್ಕೆ ಉನ್ನತ ಸಮಿತಿಯೊಂದರಿಂದ ಶಿಫಾರಸು ಸಾಧ್ಯತೆ
ಹೊಸದಿಲ್ಲಿ: ತೆರಿಗೆ ಹೊರೆ ಬಗ್ಗೆ ಜನರು ಮಾತನಾಡುತ್ತಿರುವಾಗಲೇ, ವೈಯಕ್ತಿಕ ತೆರಿಗೆಯನ್ನು ಇಳಿಸಲು ಉನ್ನತ ಸಮಿತಿಯೊಂದು ಸರಕಾರಕ್ಕೆ ಶಿಫಾರಸು ಮಾಡುವ ಸಿದ್ಧತೆಯಲ್ಲಿದೆ. ಈ ಮೂಲಕ ಮಧ್ಯಮ ವರ್ಗದ ಕೈಯಲ್ಲಿ ಇನ್ನಷ್ಟು ಕಾಸು ಇರುವಂತೆ ಮಾಡಿ, ವಹಿವಾಟು ಹೆಚ್ಚಳದ ಗುರಿ ಹೊಂದಲಾಗಿದೆ.

ಸಮಿತಿ ಪ್ರಕಾರ 5 ಲಕ್ಷ ರೂ.ಗಳಿಂದ 10 ಲಕ್ಷ ರೂ.ವರೆಗೆ ಆದಾಯ ಹೊಂದಿದವರು ಶೇ.10ರಷ್ಟು ತೆರಿಗೆ ಪಾವತಿ ಮಾಡಬೇಕು ಮತ್ತು 10ರಿಂದ 20 ಲಕ್ಷ ರೂ.ವರೆಗೆ ಆದಾಯ ಹೊಂದಿದವರು ಶೇ.20ರಷ್ಟು ತೆರಿಗೆ ಪಾವತಿ ಮಾಡುವಂತೆ ಮಾಡಬೇಕು ಎಂದು ಅದು ಹೇಳಿದೆ.

ಸದ್ಯ 2.5 ಲಕ್ಷ ರೂ.ಗಳಿಂದ 5 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.5ರಷ್ಟು ತೆರಿಗೆ ವಿಧಿಸಲಾಗುತ್ತಿದೆ. (2019ರ ಬಜೆಟ್‌ ಪ್ರಕಾರ, 5 ಲಕ್ಷ ರೂ.ವರೆಗಿನ ಆದಾಯ ಹೊಂದಿದವರಿಗೆ ಆದಾಯ ತೆರಿಗೆ ವಿನಾಯಿತಿ ಇರಲಿದೆ.) 5 ಲಕ್ಷ ರೂ.ಗಳಿಂದ 10 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.20ರಷ್ಟು ತೆರಿಗೆ ವಿಧಿಸಲಾಗುತ್ತಿದೆ. 10 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಿಸಲಾಗುತ್ತಿದೆ.

ಮೂಲಗಳ ಪ್ರಕಾರ, ಐದು ಹಂತದ ತೆರಿಗೆ ಸ್ಲಾéಬ್‌ಗಳನ್ನು ಸಮಿತಿ ಶಿಫಾರಸು ಮಾಡಿದೆ. ಇದರಲ್ಲಿ ಶೇ.5, ಶೇ.10, ಶೇ.20 ಮತ್ತು ಶೇ.30 ಮತ್ತು ಶೇ.35ರಷ್ಟು ಎಂಬುದಾಗಿ ಇರಲಿದೆ. ಅಂದರೆ, 20 ಲಕ್ಷ ರೂ.ಗಳಿಂದ 2 ಕೋಟಿ ರೂ.ವರೆಗೆ ಆದಾಯ ಹೊಂದಿವರಿಗೆ ಶೇ.30ರಷ್ಟು ತೆರಿಗೆ ಇರಲಿದ್ದು, 2 ಕೋಟಿ ರೂ. ಮೇಲ್ಪಟ್ಟ ಆದಾಯಕ್ಕೆ ಶೇ.35ರಷ್ಟು ತೆರಿಗೆ ಇರಲಿದೆ.

ಕೇಂದ್ರೀಯ ನೇರ ತೆರಿಗೆ ಮಂಡಳಿ ಸದಸ್ಯ ಅಖೀಲೇಶ್‌ ರಂಜನ್‌ ಅವರ ನೇತೃತ್ವದ ಸಮಿತಿ ಈ ಸಮಿತಿ ವರದಿ ತಯಾರು ಮಾಡಿದ್ದು, ಶಿಫಾರಸ್ಸನ್ನು ಕೇಂದ್ರ ಸರಕಾರಕ್ಕೆ ಇನ್ನಷ್ಟೇ ಸಲ್ಲಿಸಬೇಕಿದೆ ಎಂದು ನ್ಯೂಸ್‌ 18 ವರದಿ ಮಾಡಿದೆ.

ಯಾರಿಗೆ ಎಷ್ಟು ತೆರಿಗೆ?
0.25 ಲಕ್ಷ ರೂ. – ತೆರಿಗೆ ಇಲ್ಲ
5 ಲಕ್ಷ ರೂ.ವರೆಗೆ – ತೆರಿಗೆ ವಿನಾಯ್ತಿ
10 ಲಕ್ಷ ರೂ.ವರೆಗೆ – ಶೇ.10
10-20 ಲಕ್ಷ ರೂ.- ಶೇ.20
20 ಲಕ್ಷ – 2 ಕೋಟಿ ರೂ. – ಶೇ.30
2 ಕೋಟಿ ರೂ. ಗಳಿಗೂ ಹೆಚ್ಚು – ಶೇ.35

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.