ಎನ್‌ಕೌಂಟರ್‌: ಐವರು ಉಗ್ರರ ಹತ್ಯೆ


Team Udayavani, Mar 23, 2019, 12:30 AM IST

21.jpg

ಶ್ರೀನಗರ/ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಬಂಡಿಪೋರಾ ಮತ್ತು ಶೋಪಿಯಾನ್‌ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಐವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಆದರೆ, ಈ ಕಾರ್ಯಾಚರಣೆ ವೇಳೆ ಉಗ್ರರ ಒತ್ತೆಯಲ್ಲಿದ್ದ ಬಾಲಕನೊಬ್ಬನೂ ಅಸುನೀಗಿದ್ದಾನೆ.  ಮೃತ ಉಗ್ರರಲ್ಲಿ ಇಬ್ಬರು ಪಾಕಿಸ್ಥಾನಿ ಪ್ರಜೆಗಳಾಗಿದ್ದು, ಲಷ್ಕರ್‌-ಎ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದವರು ಎಂದು ಭದ್ರತಾ ಪಡೆ ಮಾಹಿತಿ ನೀಡಿದೆ. ಈ ಮೂಲಕ 24 ಗಂಟೆಗಳ ಅವಧಿಯಲ್ಲಿ ಒಟ್ಟು ಏಳು ಭಯೋತ್ಪಾದಕರನ್ನು ಸದೆಬಡಿದಂತಾಗಿದೆ. ಇಬ್ಬರು ನಾಗರಿಕರನ್ನು ಉಗ್ರರು ಒತ್ತೆಯಲ್ಲಿಟ್ಟಿದ್ದರು. ಒಬ್ಬರನ್ನು ಗುರುವಾರ ರಾತ್ರಿಯೇ ರಕ್ಷಿಸಲಾಯಿತು. ಆದರೆ, 12 ವರ್ಷದ ಬಾಲಕನನ್ನು ಉಗ್ರರು ಗುಂಡಿಕ್ಕಿ ಕೊಂದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಇದು ಜಿಹಾದ್‌ ಅಲ್ಲ: ಒತ್ತೆಯಲ್ಲಿದ್ದ 12ರ ಬಾಲಕ ಆತಿಫ್ ಮಿರ್‌ನನ್ನು ಬಿಡುಗಡೆ ಮಾಡುವಂತೆ ಗ್ರಾಮದ ಹಿರಿಯರೊಬ್ಬರು ಒತ್ತಾಯಿಸಿದ ವೀಡಿಯೋವೊಂದು ಶುಕ್ರವಾರ ಬಹಿರಂಗವಾಗಿದೆ. ಅದರಲ್ಲಿ ಅವರು, “ನೀವು ಮಾಡುತ್ತಿರುವುದು ಜಿಹಾದ್‌(ಧರ್ಮ ಯುದ್ಧ) ಅಲ್ಲ, ಜಹಾಲತ್‌ (ವಿವೇಕರಹಿತ ಕ್ರಮ)’ ಎಂದು ಉಗ್ರರಿಗೆ ಹೇಳಿರುವುದು ಸೆರೆಯಾಗಿದೆ. ಆತಿಫ್ನ ಮನೆಯೊಳಗೆ ನುಗ್ಗಿದ್ದ ಉಗ್ರರು, ಮೊದಲಿಗೆ ಆತನ ಸಹೋದರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾದರು. ಆದರೆ, ಕುಟುಂಬ ಸದಸ್ಯರು ಹರಸಾಹಸ ಪಟ್ಟು ಅಲ್ಲಿಂದ ತಪ್ಪಿಸಿಕೊಳ್ಳಲು ಆಕೆಗೆ ನೆರವಾದರು. ಇದರಿಂದ ಕ್ರುದ್ಧರಾದ ಉಗ್ರರು, ಆ ಮನೆಯ ಸದಸ್ಯರ ಮೇಲೆ ಗಂಭೀರ ಹಲ್ಲೆ ನಡೆಸಿದರು. ಕೊನೆಗೆ ಭದ್ರತಾ ಪಡೆಯ ಸಹಾಯದಿಂದ ಎಲ್ಲರನ್ನೂ ಹೊರತರಲಾಯಿತಾದರೂ, ಬಾಲಕ ಮಾತ್ರ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಾಸ್ಟರ್‌ಮೈಂಡ್‌ನ‌ ಆಪ್ತ ಸೆರೆ: ಫೆ.14ರ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌, ಜೈಶ್‌ ಉಗ್ರ ಮುದಸ್ಸಿರ್‌ನ ಆಪ್ತ ಸಜ್ಜದ್‌ ಖಾನ್‌(27) ಎಂಬಾತನನ್ನು ದಿಲ್ಲಿಯ ಲಜಪತ್‌ರಾಯ್‌ ಮಾರು ಕಟ್ಟೆ ಪ್ರದೇಶದಲ್ಲಿ ಗುರುವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಆತನನ್ನು ಕೋರ್ಟ್‌ಗೆ ಹಾಜರುಪಡಿಸಲಾ ಗಿದ್ದು, ಮಾ. 29ರವರೆಗೆ ಎನ್‌ಐಎ ವಶಕ್ಕೊಪ್ಪಿಸಿ ಕೋರ್ಟ್‌ ಆದೇಶ ನೀಡಿದೆ.

14.40 ಲಕ್ಷ ರೂ. ದಂಡ: ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ(ಫೆಮಾ) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿ ಕಾಶ್ಮೀರ ಮೂಲದ ಪ್ರತ್ಯೇಕತವಾದಿ ಸೈಯದ್‌ ಅಲಿ ಶಾ ಗಿಲಾನಿಗೆ ಜಾರಿ ನಿರ್ದೇಶನಾಲಯ 14.40 ಲಕ್ಷ ರೂ. ದಂಡ ವಿಧಿಸಿದೆ. ಜತೆಗೆ ಆತನ ಬಳಿಯಿದ್ದ 6.8 ಲಕ್ಷ ರೂ.ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಪಾಕ್‌ ರಾಷ್ಟ್ರೀಯ ದಿನದ ಕಾರ್ಯಕ್ರಮಕ್ಕೆ ಬಹಿಷ್ಕಾರ
ಉಗ್ರವಾದ, ಪ್ರತ್ಯೇಕತಾವಾದದ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಲೇ ಕುತಂತ್ರಿ ಬುದ್ಧಿ ತೋರಿಸುತ್ತಿರುವಂಥ ಪಾಕಿಸ್ಥಾನದ ರಾಷ್ಟ್ರೀಯ ದಿನದ ಕಾರ್ಯಕ್ರಮವನ್ನು ಬಹಿಷ್ಕರಿಸಲು ಭಾರತ ನಿರ್ಧರಿಸಿದೆ. ಕಾಶ್ಮೀರದ ಪ್ರತ್ಯೇಕತಾ ವಾದಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿರುವ ಹಿನ್ನೆಲೆ ಯಲ್ಲಿ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ. ಶನಿವಾರ ದಿಲ್ಲಿಯಲ್ಲಿರುವ ಪಾಕ್‌ ಹೈಕಮಿಷನ್‌ನಲ್ಲಿ ಕಾರ್ಯಕ್ರಮ ಜರುಗಲಿದ್ದು, ಸರಕಾರದ ಪ್ರತಿನಿಧಿ ಯನ್ನು ಕಳುಹಿಸಲೇ ಇರಲು ತೀರ್ಮಾನಿಸಲಾಗಿದೆ. ಈ ನಡುವೆಯೇ, ಶುಕ್ರವಾರ ಪಾಕ್‌ನ ಮಾಧ್ಯಮಗಳ ಜತೆ ಮಾತನಾಡಿರುವ ಪ್ರಧಾನಿ ಇಮ್ರಾನ್‌ ಖಾನ್‌, “ಪಾಕಿಸ್ಥಾನದಲ್ಲಿ ಜಿಹಾದಿ ಸಂಘಟನೆಗಳು ಹಾಗೂ ಜಿಹಾದಿ ಸಂಸ್ಕೃತಿಗೆ ಅವಕಾಶವಿಲ್ಲ’ ಎಂದು ಘೋಷಿಸಿದ್ದಾರೆ. 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.