ರಸ್ತೆಯಲ್ಲಿ ಆಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ: ಮೃತ್ಯು
Team Udayavani, Mar 14, 2023, 1:49 PM IST
ಹೈದರಾಬಾದ್: ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ತೆಲಂಗಾಣದಲ್ಲಿ ಬೀದಿ ನಾಯಿಗಳ ದಾಳಿಗೆ ಮತ್ತೋರ್ವ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ರಘುನಾಥಪಾಲೆಂ ಮಂಡಲದ ಪುಟಾಣಿ ತಾಂಡಾದ ಬಾನೋತ್ ಭಾರತ್ (5) ಮೃತ ಬಾಲಕ. ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ತಿಂಗಳೊಳಗೆ ನಡೆದ ಎರಡನೆ ಘಟನೆಯಾಗಿದೆ.
ತನ್ನ ಮನೆಯ ಪಕ್ಕದ ರಸ್ತೆಯಲ್ಲಿ ಬಾನೋತ್ ಭಾರತ್ ಆಡುತ್ತಿದ್ದರು. ಈ ವೇಳೆ ಬೀದಿ ನಾಯಿಗಳು ಏಕಾಏಕಿ ಬಂದು ಬಾಲಕನ ಮೇಲೆ ದಾಳಿ ನಡೆಸಿದೆ. ನಾಯಿಯ ಕಡಿತದಿಂದ ತೀವ್ರವಾಗಿ ಗಾಯಗೊಂಡ ಭಾರತ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಬಾನೋತ್ ಮೃತಪಟ್ಟಿದ್ದಾನೆ.
ಕಳೆದ ತಿಂಗಳು 4 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಪರಿಣಾಮ ಬಾಲಕ ಮೃತಪಟ್ಟಿದ್ದ, ಆದಾದ ಬಳಿಕ ಪಕ್ಕದ ಪ್ರದೇಶದಲ್ಲಿ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ತೀವ್ರತರದ ಗಾಯಗೊಳಿಸಿತ್ತು.
ಈಗಾಗಲೇ ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ, ಬೀದಿ ನಾಯಿಗಳ ನಿಯಂತ್ರಣದ ಬಗ್ಗೆ ಹಲವು ಕ್ರಮಕೈಗೊಳ್ಳಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು