ಆಟೋ ಚಾಲಕನಾಗಿದ್ದಾತ…27 ವರ್ಷಗಳಲ್ಲಿ 5000ಕ್ಕೂ ಅಧಿಕ ಕಾರು ಕಳ್ಳತನ, ಐಶಾರಾಮಿ ಜೀವನ

ಅನಿಲ್ ಇತ್ತೀಚೆಗೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದ.

Team Udayavani, Sep 5, 2022, 6:28 PM IST

ಆಟೋ ಚಾಲಕನಾಗಿದ್ದಾತ…27 ವರ್ಷಗಳಲ್ಲಿ 5000ಕ್ಕೂ ಅಧಿಕ ಕಾರು ಕಳ್ಳತನ, ಐಶಾರಾಮಿ ಜೀವನ

ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ 5,000ಕ್ಕೂ ಅಧಿಕ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪಿ ಅನಿಲ್ ಚೌಹಾಣ್ ಎಂಬಾತನನ್ನು ದೆಹಲಿ ಪೊಲೀಸರು ಸೋಮವಾರ (ಸೆ.05) ಬಂಧಿಸಿದ್ದು, ಈತ ದೇಶದಲ್ಲಿ ಅತೀ ಹೆಚ್ಚು ಕಾರು ಕಳ್ಳತನ ಮಾಡಿರುವ ವ್ಯಕ್ತಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಉಳ್ಳಾಲ: ಮದುವೆಯಾದ 15 ದಿನದಲ್ಲೇ ವಿಷ ಸೇವಿಸಿ ನವ ವಿವಾಹಿತೆ ಆತ್ಮಹತ್ಯೆ

ಕಾರು ಕಳ್ಳತನದಿಂದ ಈತ ದೆಹಲಿ, ಮುಂಬೈ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರೀ ಆಸ್ತಿಯನ್ನು ಹೊಂದಿದ್ದು, 52 ವರ್ಷದ ಅನಿಲ್ ಐಶಾರಾಮಿ ಜೀವನ ನಡೆಸುತ್ತಿದ್ದ. ಈತ ದೇಶದಲ್ಲಿಯೇ ಅತೀ ಹೆಚ್ಚು ಕಾರು ಕಳ್ಳತನ ಮಾಡಿರುವ ಆರೋಪಿಯಾಗಿದ್ದಾನೆ,

27 ವರ್ಷಗಳಲ್ಲಿ 5,000 ಕಾರು ಕಳ್ಳತನ, ಕೊಲೆ:

27 ವರ್ಷಗಳ ಅವಧಿಯಲ್ಲಿ ಆರೋಪಿ ಅನಿಲ್ ಐದು ಸಾವಿರಕ್ಕೂ ಅಧಿಕ ಕಾರುಗಳನ್ನು ಕಳವು ಮಾಡಿದ್ದಾನೆ. ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದೇಶ ಬಂಧು ಗುಪ್ತಾ ರಸ್ತೆ ಪ್ರದೇಶದಲ್ಲಿ ಅನಿಲ್ ನನ್ನು ಬಂಧಿಸಿದ್ದರು.

ಪೊಲೀಸರ ಮಾಹಿತಿ ಮೇರೆಗೆ, ಅನಿಲ್ ಇತ್ತೀಚೆಗೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದ. ಈತ ಉತ್ತರಪ್ರದೇಶಕ್ಕೆ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ. ಅನಿಲ್ ಈಶಾನ್ಯ ರಾಜ್ಯಗಳಲ್ಲಿ ನಿಷೇಧಿತ ಬಂಡುಕೋರ ಸಂಘಟನೆಗಳಿಗೆ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ ಎಂದು ತಿಳಿಸಿದೆ.

ಅನಿಲ್ ದೆಹಲಿಯ ಖಾನ್ಪುರ್ ಪ್ರದೇಶದಲ್ಲಿ ವಾಸವಾಗಿದ್ದಾಗ ಆಟೋ ರಿಕ್ಷಾ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಬಳಿಕ 1995ರಲ್ಲಿ ಈತ ಕಾರು ಕಳ್ಳತನ ಮಾಡಲು ಪ್ರಾರಂಭಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

90ರ ದಶಕದಲ್ಲಿ ಅನಿಲ್ ಹೆಚ್ಚಾಗಿ ಮಾರುತಿ 800 ಕಾರುಗಳನ್ನು ಕಳವು ಮಾಡುತ್ತಿದ್ದ. ದೇಶದ ವಿವಿಧ ಭಾಗಗಳಲ್ಲಿ ಅನಿಲ್ ಚೌಹಾಣ್ ಕಾರುಗಳನ್ನು ಕದಿಯುತ್ತಿದ್ದ, ನಂತರ ಅವುಗಳನ್ನು ನೇಪಾಳ, ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ. ಕಳವು ವೇಳೆ ಅನಿಲ್ ಕೆಲವು ಟ್ಯಾಕ್ಸಿ ಡ್ರೈವರ್ ಗಳನ್ನು ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೆಲವು ವರ್ಷಗಳ ನಂತರ ಅನಿಲ್ ಚೌಹಾಣ್ ಅಸ್ಸಾಂಗೆ ಸ್ಥಳಾಂತರಗೊಂಡಿದ್ದ. ತನ್ನಲ್ಲಿದ್ದ ಅಪಾರ ಹಣದಿಂದ ದೆಹಲಿ, ಮುಂಬೈ, ಈಶಾನ್ಯ ರಾಜ್ಯಗಳಲ್ಲಿ ಆಸ್ತಿಗಳನ್ನು ಖರೀದಿಸಿದ್ದ. 2015ರಲ್ಲಿಯೂ ಅನಿಲ್ ನನ್ನು ಬಂಧಿಸಲಾಗಿತ್ತು, ನಂತರ 2020ರಲ್ಲಿ ಬಿಡುಗಡೆಗೊಂಡಿದ್ದ ಎಂದು ವರದಿ ತಿಳಿಸಿದೆ.

ಅನಿಲ್ ಚೌಹಾಣ್ ವಿರುದ್ಧ 180 ಪ್ರಕರಣಗಳು ದಾಖಲಾಗಿವೆ. ಈತನಿಗೆ ಮೂವರು ಪತ್ನಿಯಂದಿರು ಹಾಗೂ ಏಳು ಮಕ್ಕಳಿರುವುದಾಗಿ ವರದಿ ತಿಳಿಸಿದೆ. ಜಾರಿ ನಿರ್ದೇಶನಾಲಯ ಕೂಡಾ ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.