5ನೇ ಹಂತದಲ್ಲಿ ಹಿಂಸಾಚಾರ : ಶೇ.62.5 ಮತ
Team Udayavani, May 7, 2019, 6:08 AM IST
ನವದೆಹಲಿ: ಗ್ರೆನೇಡ್ ಎಸೆತ, ಉಗ್ರರಿಂದ ಸ್ಫೋಟ, ಹಿಂಸಾಚಾರದಂಥ ಘಟನೆಗಳೊಂದಿಗೆ ಪ್ರಸಕ್ತ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನಕ್ಕೆ ತೆರೆಬಿದ್ದಿದೆ. 7 ರಾಜ್ಯಗಳ 51 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸುಮಾರು ಶೇ.62.5ರಷ್ಟು ಮತದಾನ ದಾಖಲಾಗಿದೆ. 2014ರ ಚುನಾವಣೆಯಲ್ಲಿ ಶೇ.61.76 ಮತದಾನವಾಗಿತ್ತು.
ಪ್ರತಿ ಹಂತದ ಮತದಾನದಲ್ಲೂ ಹಿಂಸಾಚಾರಕ್ಕೆ ಸಾಕ್ಷಿಯಾದ ಪಶ್ಚಿಮ ಬಂಗಾಳದಲ್ಲಿ 5ನೇ ಹಂತದಲ್ಲೂ ವ್ಯಾಪಕ ಹಿಂಸೆ ತಾಂಡವವಾಡಿದೆ. ಪ್ರತ್ಯೇಕ ಘಟನೆಗಳಲ್ಲಿ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಲಾಕೆಟ್ ಚಟರ್ಜಿ ಅವರ ಕಾರಿನ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾದ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗ್ರೆನೇಡ್ ಎಸೆದಿದ್ದಾರೆ. ಮತ್ತೂಂದು ಮತಗಟ್ಟೆ ಸಮೀಪ ಉಗ್ರರು ಸ್ಫೋಟಕ ಎಸೆದು ಸ್ಫೋಟಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಪುಲ್ವಾಮಾದಲ್ಲಿ ಬಹಿಷ್ಕಾರ: ಫೆ.14ರಂದು 40 ಸಿಆರ್ಪಿಎಫ್ ಯೋಧರ ಸಾವಿಗೆ ಪುಲ್ವಾಮಾ ಜಿಲ್ಲೆಯ 19 ವರ್ಷದ ಆತ್ಮಾಹುತಿ ಬಾಂಬರ್ ಆದಿಲ್ ದರ್ನ ಗ್ರಾಮಸ್ಥರು ಚುನಾವಣೆಯನ್ನೇ ಬಹಿಷ್ಕರಿಸಿದ್ದಾರೆ. ಗಂಡಿಬಾಗ್ ಗ್ರಾಮದ ಒಬ್ಬರು ಕೂಡ ಹಕ್ಕು ಚಲಾಯಿಸಿಲ್ಲ. ವ್ಯವಸ್ಥೆಯಿಂದ ಬೇಸತ್ತು ಈ ತೀರ್ಮಾನ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ. ವಿಚಿತ್ರವೆಂದರೆ, ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ 2ನೇ ಹಂತದ ಚುನಾವಣೆಯಲ್ಲಿ ಶೇ.2ಕ್ಕಿಂತಲೂ ಕಡಿಮೆ ಮತದಾನ ದಾಖಲಾಗಿದೆ. ಉ.ಪ್ರದೇಶ, ರಾಜಸ್ಥಾನ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಇವಿಎಂ ಸಮಸ್ಯೆಯೂ ತಲೆದೋರಿದೆ.
ಈ ಹಂತದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಸ್ಮತಿ ಇರಾನಿ ಸೇರಿದಂತೆ ಅನೇಕ ರಾಜಕೀಯ ಪ್ರಮುಖರ ಭವಿಷ್ಯ ನಿರ್ಧಾರವಾಗಿದೆ. ಅಲ್ಲದೆ, ಇದು ಕಾಂಗ್ರೆಸ್, ಬಿಜೆಪಿ, ಎಸ್ಪಿ-ಬಿಎಸ್ಪಿ ಮೈತ್ರಿಗೂ ಮಹತ್ವದ ಹಂತ ಎನಿಸಿಕೊಂಡಿತ್ತು. ಮೇ 12ರಂದು 6ನೇ ಹಂತದ ಮತದಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ