ರಾಜಸ್ಥಾನದಲ್ಲಿ “ಆನೆ ಜೇಬು’ ಈಗ ಖಾಲಿ
Team Udayavani, Sep 18, 2019, 5:18 AM IST
ಜೈಪುರ/ಲಕ್ನೋ: ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾಗಿರುವ ಬಿಎಸ್ಪಿಯ ಎಲ್ಲಾ ಆರು ಶಾಸಕರು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದು, ಬಿಎಸ್ಪಿ ನಾಯಕಿ ಮಾಯಾವತಿಗೆ ಬಲು ದೊಡ್ಡ ಹಿನ್ನಡೆಯಾಗಿದೆ. ಇದೊಂದು ಮೋಸ ಎಂದು ಬಣ್ಣಿಸಿರುವ ಅವರು, ಕಾಂಗ್ರೆಸ್ ಯಾವುದೇ ಕಾರಣಕ್ಕೂ ನಂಬಲು ಅನರ್ಹವಾಗಿರುವ ಪಕ್ಷ ಎಂಬುದು ಸಾಬೀತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆ ಯಿಂದಾಗಿ 200 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ನ ಬಲ 106ಕ್ಕೆ ಏರಿಕೆಯಾಗಿದೆ. ಸೋಮವಾರ ತಡರಾತ್ರಿ ಬಿಎಸ್ಪಿ ಶಾಸಕರು ವಿಧಾನಸ ಭಾಧ್ಯಕ್ಷ ಸಿ.ಪಿ.ಜೋಶಿ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರುವ ನಿರ್ಧಾರದ ಬಗ್ಗೆ ಪತ್ರ ಸಲ್ಲಿಸಿದರು. ಇದಕ್ಕಿಂತ ಮೊದಲು ಅಶೋಕ್ ಗೆಹೊÉàಟ್ ನಾಯಕತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಿಎಸ್ಪಿ ಬಾಹ್ಯ ಬೆಂಬಲ ನೀಡುತ್ತಿತ್ತು. ಇದರ ಜತೆಗೆ 13 ಪಕ್ಷೇತರ ಶಾಸಕರ ಪೈಕಿ 12 ಮಂದಿ ಸರ್ಕಾರಕ್ಕೆ ಈಗಾಗಲೇ ಬೆಂಬಲ ನೀಡುತ್ತಿದ್ದಾರೆ.
ರಾಜಸ್ಥಾನದಲ್ಲಿ ಹೀಗೆ ಆಗುತ್ತಿರುವುದು 2ನೇ ಬಾರಿ. 2009ರಲ್ಲಿ ಅಶೋಕ್ ಗೆಹೊÉàಟ್ 6 ಬಿಎಸ್ಪಿ ಶಾಸಕರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡು ಪಕ್ಷದ ಸರ್ಕಾರವನ್ನು ಗಟ್ಟಿಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ