ಉದಕಮಂಡಲ: ಬಸ್ಸು ಪ್ರಪಾತಕ್ಕೆ ಬಿದ್ದು 6 ಸಾವು, 28 ಮಂದಿಗೆ ಗಾಯ
Team Udayavani, Jun 14, 2018, 3:59 PM IST
ಉದಕಮಂಡಲ : ತಮಿಳು ನಾಡಿನ ನೀಲಗಿರಿಯ ಜಿಲ್ಲೆಯ ದುರ್ಗಮ ಬೆಟ್ಟ ಪ್ರದೇಶದಲ್ಲಿ ಪ್ರಯಾಣಿಕರ ಬಸ್ಸು 500 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಂಭವಿಸಿದ ಭೀಕರ ಅವಘಡದಲ್ಲಿ 6 ಮಂದಿ ಮೃತಪಟ್ಟು ಇತರ 28 ಮಂದಿ ಗಾಯಗೊಂಡರು.
ಇಲ್ಲಿಂದ ಸುಮಾರು 10 ಕಿ.ಮೀ. ದೂರದ ಮಂಡದ ಎಂಬದಲ್ಲಿ ಘಾಟ್ ರಸ್ತೆಯಲ್ಲಿನ ಗುಂಡಿಯೊಂದನ್ನು ತಪ್ಪಿಸುವ ಚಾಲಕನ ಯತ್ನದಲ್ಲಿ ರಾಜ್ಯ ಸಾರಿಗೆ ನಿಗಮದ ಬಸ್ಸು ನಿಯಂತ್ರಣ ತಪ್ಪಿ 500 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ಆರು ಮಂದಿಯಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. 28 ಮಂದಿ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಿದೆ ಎಂದು ಪೊಲೀಸರು ಹೇಳಿದ್ದಾರೆ. ಬಸ್ಸು ಇಲ್ಲಿಗೆ ಸಮೀಪದ ಕೂನೂರಿಗೆ ತೆರಳುತ್ತಿತ್ತು. ನೀಲಗಿರಿ ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಬಿರುಸಿನ ಮಳೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!