ತಮಿಳುನಾಡಿಗೆ ಲಷ್ಕರ್ ಉಗ್ರರು ನುಸುಳಿರುವ ಶಂಕೆ ; ಎಲ್ಲೆಡೆ ಕಟ್ಟೆಚ್ಚರ
Team Udayavani, Aug 23, 2019, 3:09 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚೆನ್ನೈ: ಆರು ಜನ ಲಷ್ಕರ್ ಉಗ್ರರು ಶ್ರೀಲಂಕಾ ಮೂಲಕ ಕೊಯಂಬತ್ತೂರಿಗೆ ನುಸುಳಿದ್ದಾರೆ ಎಂಬ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯನ್ನು ಆಧರಿಸಿ ತಮಿಳುನಾಡು ಪೊಲೀಸರು ಈ ವಿಷಯನ್ನು ಬಹಿರಂಗಪಡಿಸಿದ್ದಾರೆ ಮತ್ತು ಕೊಯಂಬತ್ತೂರಿನಲ್ಲಿ ಹೈ ಅಲರ್ಟ್ ಸ್ಥಿತಿ ನಿರ್ಮಾಣವಾಗಿದೆ.
ಐದು ಜನ ಲಂಕಾ ತಮಿಳರು ಮತ್ತು ಮತ್ತು ಓರ್ವ ಪಾಕಿಸ್ಥಾನಿ ನಾಗರಿಕ ಒಳಗೊಂಡಿರುವ ತಂಡ ನಗರಕ್ಕೆ ನುಸುಳಿದ್ದಾರೆ ಎಂಬ ಗುಪ್ತಚರ ಮಾಹಿತಿಯನ್ನು ಆಧರಿಸಿ ತಮಿಳುನಾಡು ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ಸ್ಥಿತಿ ವಹಿಸುವಂತೆ ಸೂಚನೆ ನೀಡಿದ್ದಾರೆ.
ಈ ಸೂಚನೆಯನ್ನು ಆಧರಿಸಿ ಚೆನ್ನೈನಲ್ಲೂ ಸಹ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗಿದೆ. ಇನ್ನು ತಮಿಳುನಾಡಿಗೆ ನುಸುಳಿರುವ ಶಂಕಿತರಿಬ್ಬರ ಭಾವಚಿತ್ರಗಳನ್ನು ಕೊಯಮುತ್ತೂರು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಇನ್ನು ರಾಜ್ಯಾದ್ಯಂತ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಡಿಜಿಪಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
– ವಸತಿಗೃಹಗಳ ತಪಾಸಣೆ
– ಸ್ಪೋಟಕ ವಸ್ತುಗಳ ಸಾಗಾಟ ತಡೆಗೆ ವಾಹನಗಳ ತಪಾಸಣೆ
– ಪೊಲೀಸ್ ಗಸ್ತು ಮತ್ತು ತಪಾಸಣೆ
– ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳಿಗೆ ಲುಕ್ ಔಟ್ ನೋಟೀಸ್
– ರೈಲ್ವೇ ನಿಲ್ದಾಣಗಳು, ಬಸ್ ಸ್ಟ್ಯಾಂಡ್ ಗಳು ಮತ್ತು ವಿಮಾನ ನಿಲ್ದಾಣಗಳ ತಪಾಸಣೆ
– ಪ್ರಮುಖ ದೇವಸ್ಥಾನಗಳಲ್ಲಿ ಸುರಕ್ಷತಾ ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ