ಪುಲ್ವಾಮಾ ಎನ್‌ಕೌಂಟರ್‌ 6 ಭಯೋತ್ಪಾದಕರ ಹತ್ಯೆ


Team Udayavani, Dec 23, 2018, 6:00 AM IST

6-terrorists-killed.jpg

ಶ್ರೀನಗರ: ಕಣಿವೆ ರಾಜ್ಯದಲ್ಲಿ ಒಂದೇ ದಿನ ಆರು ಉಗ್ರರನ್ನು ಹೊಡೆದು ರುಳಿಸುವ ಮೂಲಕ ಭದ್ರತಾ ಪಡೆಯು ಅಲ್‌ಖೈದಾ ಅಂಗ ಸಂಸ್ಥೆಯಾದ ಅನ್ಸಾರ್‌ ಗಝÌತುಲ್‌ ಹಿಂದ್‌ ಉಗ್ರ ಸಂಘಟನೆಗೆ ಆಘಾತ ನೀಡಿದೆ. 

ಮಹತ್ವದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯು ಪುಲ್ವಾಮಾದಲ್ಲಿ ಎನ್‌ಕೌಂಟರ್‌ ನಡೆಸಿ 6 ಪ್ರಮುಖ ಭಯೋತ್ಪಾದಕರನ್ನು ಹತ್ಯೆಗೈದಿದೆ.

ಹತ ಉಗ್ರರೆಲ್ಲರೂ ಜಾಕೀರ್‌ ಮೂಸಾ ನೇತೃತ್ವದ ಅನ್ಸಾರ್‌ ಗಝÌತುಲ್‌ ಹಿಂದ್‌ ಸಂಘಟನೆಗೆ ಸೇರಿದವರಾಗಿದ್ದು, ಈ ಸಂಘಟನೆಯು ನಿಷೇಧಿತ ಅಲ್‌ಖೈದಾದ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿತ್ತು ಎಂದು ಕಾಶ್ಮೀರ ವಲಯದ ಐಜಿಪಿ ಸ್ವಾಮಿ ಪ್ರಕಾಶ್‌ ಪಾಣಿ ಮಾಹಿತಿ ನೀಡಿದ್ದಾರೆ.

ಉಗ್ರರ ಇರುವಿಕೆ ಕುರಿತು ಖಚಿತ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅವಂತಿಪೋರಾದ ಅರಂಪೋರಾ ಗ್ರಾಮದಲ್ಲಿ ಭದ್ರತಾ ಪಡೆ ಶೋಧ ಕಾರ್ಯ ಆರಂಭಿಸಿತು. ಅಷ್ಟರಲ್ಲಿ ಉಗ್ರರು ಗುಂಡು ಹಾರಿಸಲಾರಂಭಿಸಿತು. ಈ ವೇಳೆ ಎರಡೂ ಕಡೆ ಗುಂಡಿನ ಚಕಮಕಿ ನಡೆದಿದ್ದು, ಆರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಯಿತು ಎಂದು ಅವರು ತಿಳಿಸಿದ್ದಾರೆ. 

ಮೃತ ಉಗ್ರರನ್ನು ಸೋಲಿಹಾ ಮೊಬಮ್ಮದ್‌ ಅಖೂ°ನ್‌, ಫೈಸಲ್‌ ಅಹ್ಮದ್‌ ಖಾಂಡೆ, ನದೀಂ ಅಹ್ಮದ್‌ ಸೋಫಿ, ರಶೀದ್‌ ಮಿರ್‌, ರವೂಫ್ ಮಿರ್‌ ಮತ್ತು ಉಮರ್‌ ರಂಜಾನ್‌ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಜಮ್ಮು-ಕಾಶ್ಮೀರದ ನಿವಾಸಿಗಳಾಗಿದ್ದು, ಹಲವು ಉಗ್ರ ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾಗಿದ್ದರು. 

ಶಸ್ತ್ರಾಸ್ತ್ರಗಳು ವಶ: ಎನ್‌ಕೌಂಟರ್‌ ನಡೆದ ಸ್ಥಳದಿಂದ ರೈಫ‌ಲ್‌ಗ‌ಳು ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರು ಅವಿತಿದ್ದ ಪ್ರದೇಶದಲ್ಲಿ ಸ್ಫೋಟಕಗಳು ಅಡಗಿಸಿಟ್ಟಿರುವ ಸಾಧ್ಯತೆ ಯಿರುವ ಕಾರಣ, ಯಾರೂ ಆ ಸ್ಥಳದತ್ತ ಸಮೀಪಿಸದಂತೆ ಮೊದಲೇ ನಾಗರಿಕರಿಗೆ ಸೂಚನೆ ನೀಡಲಾಗಿತ್ತು ಎಂದೂ ಐಜಿಪಿ ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಜಿಲ್ಲೆಯಲ್ಲಿ ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಜತೆಗೆ, ಕಣಿವೆ ರಾಜ್ಯದಿಂದ ಜಮ್ಮುವಿನ ಬನ್ನಿಹಾಲ್‌ ನಗರಕ್ಕೆ ಸಂಪರ್ಕ ಕಲ್ಪಿಸುವ ರೈಲು ಸೇವೆಗಳನ್ನೂ ರದ್ದು ಮಾಡಲಾಗಿತ್ತು.

ಗ್ರೆನೇಡ್‌ ದಾಳಿ: ಐವರು ಯೋಧರಿಗೆ ಗಾಯ
ಜಮ್ಮು-ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಶನಿವಾರ ಸಂಜೆ ಉಗ್ರರು ಗ್ರೆನೇಡ್‌ ದಾಳಿ ನಡೆಸಿದ್ದು, ಭದ್ರತಾ ಪಡೆಯ ಐವರು ಯೋಧರು ಗಾಯಗೊಂಡಿದ್ದಾರೆ. ಬಿಜ್‌ಬೆಹಾರಾದ ಅರ್ವಾನಿ ಪ್ರದೇಶದಲ್ಲಿ ಜನಸಮೂಹದ ನಡುವೆ ಇದ್ದ ಉಗ್ರರು ಏಕಾಏಕಿ ಯೋಧರನ್ನು ಗುರಿಯಾಗಿಸಿಕೊಂಡು ಗ್ರೆನೇಡ್‌ ಎಸೆದಿದ್ದಾರೆ. ಪರಿಣಾಮ ಐವರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.