Kerala: ಸೋಮವಾರ ಸಂಜೆ ಅಪಹರಣವಾಗಿದ್ದ 6 ವರ್ಷದ ಬಾಲಕಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ
Team Udayavani, Nov 28, 2023, 3:06 PM IST
ತಿರುವನಂತಪುರಂ: ಸೋಮವಾರ ಸಂಜೆ ನಾಪತ್ತೆಯಾಗಿದ್ದ ಕೇರಳದ ಆರು ವರ್ಷದ ಬಾಲಕಿ ಕೊಲ್ಲಂನ ಆಶ್ರಮ ಮೈದಾನದಲ್ಲಿ ಪತ್ತೆಯಾಗಿದ್ದಾಳೆ. 20 ಗಂಟೆಗಳ ಹುಡುಕಾಟದ ಬಳಿಕ ಕೇರಳ ಪೊಲೀಸರು ಬಾಲಕಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಸೋಮವಾರ ಸಂಜೆ 6 ವರ್ಷದ ಬಾಲಕಿ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಂಜೆ ನಾಲ್ಕು ಗಂಟೆಯ ಹೊತ್ತಿಗೆ ಟ್ಯೂಷನ್ಗೆ ತೆರಳುತ್ತಿದ್ದಾಗ ಅಪಹರಣಕಾರರು ಬಾಲಕಿಯನ್ನು ಅಪಹರಣ ಮಾಡಿದ್ದರು ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ರಾಜ್ಯಾದ್ಯಂತ ನಖಾ ಬಂದಿ ನಡೆಸಿ ಬಾಲಕಿಯ ಪತ್ತೆ ಕಾರ್ಯಾಚರಣೆಗೆ ಮುಂದಾಗಿದ್ದರು, ಅಲ್ಲದೆ ಈ ನಡುವೆ ಅಪಹರಣಕಾರರು ಬಾಲಕಿಯ ಪೋಷಕರಿಗೆ ಕರೆ ಮಾಡಿ ಹತ್ತು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.
ಬಾಲಕಿಯ ಎಂಟು ವರ್ಷದ ಸಹೋದರನ ಪ್ರಕಾರ, ಅಪಹರಣಕಾರರು ಬಿಳಿ ಕಾರಿನಲ್ಲಿ ಬಂದು ಬಾಲಕಿಯನ್ನು ಅಪಹರಿಸಿದ್ದಾರೆ ಎಂದು ಹೇಳಿದ್ದ ಬಾಲಕನ ಮಾಹಿತಿಯ ಮೇರೆಗೆ ಪೊಲೀಸರು ಬಿಳಿ ಬಣ್ಣದ ಕಾರುಗಳನ್ನು ತಪಾಸಣೆ ನಡೆಸಲು ಆರಂಭಿಸಿದ್ದರು.
ಬಾಲಕಿಯ ಅಪಹರಣ ವಿಚಾರ ಗೊತ್ತಾಗುತ್ತಿದ್ದಂತೆ ಕೇರಳ ಸಿಎಂ ಪೊಲೀಸರೊಂದಿಗೆ ಮಾತನಾಡಿ ಶೀಘ್ರದಲ್ಲಿ ಮಗುವನ್ನು ಪತ್ತೆ ಹಚ್ಚುವಂತೆ ನಿರ್ದೇಶನವನ್ನೂ ನೀಡಿದ್ದರು ಇದಾದ ಬಳಿಕ ಪೊಲೀಸರು ತನಿಖಾಗಾಗಿ ಹೆಚ್ಚಿನ ತಂಡಗಳನ್ನು ರಚಿಸಿ ಬಾಲಕಿಯ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ಈ ನಡುವೆ ಸುಮಾರು ೨೦ ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳವಾರ ಕೊಲ್ಲಂನ ಆಶ್ರಮ ಮೈದಾನ ಬಳಿ ಬಾಲಕಿ ಪತ್ತೆಯಾಗಿದ್ದಾಳೆ.
ಸದ್ಯ ಅಪಹರಣಗೊಂಡ ಬಾಲಕಿ ಸುರಕ್ಷಿತವಾಗಿ ಪತ್ತೆಯಾಗಿದ್ದು, ಅಪಹರಣಕಾರರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಅಂತಿಮ ಹಂತ ತಲುಪಿದ ಕಾರ್ಯಾಚರಣೆ:ಶೀಘ್ರವೇ 41 ಕಾರ್ಮಿಕರ ರಕ್ಷಣೆ,41 ಆಂಬುಲೆನ್ಸ್ ವ್ಯವಸ್ಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ