ಶಿರ್ಡಿ: 3 ದಿನಗಳಲ್ಲಿ 6.66ಕೋ.ರೂ.ದೇಣಿಗೆ ಸಂಗ್ರಹ !


Team Udayavani, Aug 1, 2018, 12:55 PM IST

shiradi-saibaba.jpg

ಶಿರ್ಡಿ: ಇಲ್ಲಿನ ಪ್ರಸಿದ್ಧ  ಸಾಯಿಬಾಬಾ ಮಂದಿರದಲ್ಲಿ  ನಡೆದ  ಮೂರು ದಿನಗಳ ಗುರು ಪೂರ್ಣಿಮೆ ಹಬ್ಬ  ಆಚರಣೆ  ಸಮಯದಲ್ಲಿ   ಶಿರ್ಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌  ಭಕ್ತರಿಂದ 6.66 ಕೋ.ರೂ.ಗಿಂತಲೂ ಅಧಿಕ ದೇಣಿಗೆಗಳನ್ನು  ಪಡೆದಿದೆ.  

ದೇಶ-ವಿದೇಶಗಳಿಂದ ಆಗಮಿಸಿದ ಭಕ್ತರು ಜು. 26ರಿಂದ 28ರ ವರೆಗೆ ಮಂದಿರದ ದೇಣಿಗೆ ಪೆಟ್ಟಿಗೆಗಳಲ್ಲಿ 3.83 ಕೋ.ರೂ.ಗಳ ನಗದು ದೇಣಿಗೆ ನೀಡಿದರು ಎಂದು ಶಿರ್ಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನ ಮುಖ್ಯ ಕಾರ್ಯಕಾರಿ ಅಧಿಕಾರಿ (ಸಿಎಒ) ರುಬಾಲ್‌ ಅಗರ್ವಾಲ್‌  ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದಕ್ಕೆ ಹೆಚ್ಚುವರಿಯಾಗಿ ದೇಣಿಗೆ ಕೌಂಟರ್‌ಗಳಲ್ಲಿ  1.57 ಕೋ.ರೂ. ಗಳ ದೇಣಿಗೆಗಳನ್ನು ಪಡೆಯಲಾಗಿದೆ ಎಂದವರು ಹೇಳಿದ್ದಾರೆ.   ಆನ್‌ಲೈನ್‌, ಡೆಬಿಟ್‌ ಕಾರ್ಡ್‌, ಚೆಕ್‌ ಮತ್ತು ಡಿಮಾಂಡ್‌ ಡ್ರಾಫ್ಟ್‌ (ಡಿಡಿ)ಗಳ ಮೂಲಕ ಮಂದಿರಕ್ಕೆ ಸುಮಾರು 1 ಕೋಟಿ ರೂ.ಗಳಷ್ಟು ದೇಣಿಗೆ ಲಭ್ಯವಾಗಿದೆ ಎಂದು ಅಗರ್ವಾಲ್‌ ನುಡಿದಿದ್ದಾರೆ. ಅಮೆರಿಕ, ಲಂಡನ್‌, ಮಲೇಶಿಯಾ, ಕೆನಡಾ, ನ್ಯೂಜಿಲೆಂಡ್‌  ಮತ್ತಿತರ ಕೊಲ್ಲಿ ರಾಷ್ಟ್ರಗಳ ಭಕ್ತರಿಂದ  11.25 ಲ.ರೂ. ಮೌಲ್ಯದ ವಿದೇಶಿ ಕರೆನ್ಸಿಗಳು ದಾನ ರೂಪದಲ್ಲಿ ದೊರೆತಿವೆ. ಟ್ರಸ್ಟ್‌  ಹಬ್ಬದ ವೇಳೆ ಗುರುದಕ್ಷಿಣೆ ರೂಪದಲ್ಲಿ  13.53 ಲ.ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಪಡೆದಿದೆ ಎಂದವರು ಹೇಳಿದ್ದಾರೆ.

ದೇಣಿಗೆಗಳ ಹೊರತಾಗಿ ಟ್ರಸ್ಟ್‌ಗೆ  ಪಾಸ್‌, ಲಡ್ಡು ವಿತರಣೆ ಹಾಗೂ ಭಕ್ತರಿಗೆ ಬಡಿಸಲಾದ ಭೋಜನದಿಂದ 2.7 ಕೋ.ರೂ. ಆದಾಯ ಸಂಗ್ರಹವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಧಿಕ ದೇಣಿಗೆ
ಕಳೆದ ವರ್ಷದ  ಗುರುಪೂರ್ಣಿಮೆ ಆಚರಣೆಯ ತುಲನೆಯಲ್ಲಿ  ಈ ವರ್ಷ ಸುಮಾರು 1.10 ಕೋ.ರೂ.ಗಿಂತಲೂ ಅಧಿಕ ಮೊತ್ತದ ದೇಣಿಗೆಗಳನ್ನು ಪಡೆಯಲಾಗಿದೆ. ಕಳೆದ ವರ್ಷ ಮೂರು ದಿನಗಳ ಉತ್ಸವ ಆಚರಣೆಯ ವೇಳೆ 5.52 ಕೋ.ರೂ.ಗಳ ದೇಣಿಗೆ ಸಂಗ್ರಹವಾಗಿತ್ತು.

ಶಿರ್ಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌  ತನ್ನ ಖಜಾನೆಯಲ್ಲಿ 425  ಕೆ.ಜಿ. ಚಿನ್ನ ಹಾಗೂ 4,800 ಕೆ.ಜಿ.  ಬೆಳ್ಳಿ ಆಭರಣಗಳನ್ನು  ಹೊಂದಿರುವ ಹೊರತಾಗಿ  ವಿವಿಧ ರಾಷ್ಟ್ರೀಕೃತ ಬ್ಯಾಂಕಗಳಲ್ಲಿ  ಒಟ್ಟು 2,180 ಕೋ.ರೂ.ಗಳ ಸ್ಥಿರ ಠೇವಣಿಗಳನ್ನು ಹೊಂದಿದೆ ಎಂದು ಅಗರ್ವಾಲ್‌ ಅವರು ಹೇಳಿದ್ದಾರೆ.

ಈ ಬಾರಿಯ ಗುರುಪೂರ್ಣಿಮೆ ಆಚರಣೆಯ ವೇಳೆ ದೇಶ ಹಾಗೂ ವಿದೇಶಗಳ ವಿವಿಧ ಭಾಗಗಳಿಂದ ಸುಮಾರು 3 ಲಕ್ಷ ಭಕ್ತರು ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿದ್ದರು ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.