Uttarkashi ; ಬಸ್ ಕಮರಿಗೆ ಬಿದ್ದು 7 ಯಾತ್ರಾರ್ಥಿಗಳ ಮೃತ್ಯು
Team Udayavani, Aug 20, 2023, 10:49 PM IST
ಉತ್ತರಕಾಶಿ : ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಭಾನುವಾರ ಗುಜರಾತ್ನಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಕಮರಿಗೆ ಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 27 ಜನರನ್ನು ರಕ್ಷಿಸಲಾಗಿದ್ದು, ಬಸ್ ಅವಶೇಷಗಳಲ್ಲಿ ಸಿಲುಕಿರುವ ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ.
ಬಸ್ ಗಂಗೋತ್ರಿಯಿಂದ ಹಿಂತಿರುಗುತ್ತಿದ್ದಾಗ ಗಂಗ್ನಾನಿಯಲ್ಲಿ ಅಪಘಾತ ಸಂಭವಿಸಿದೆ. ಕಮರಿಗೆ ಬಿದ್ದಾಗ ಬಸ್ ನಲ್ಲಿ ಒಟ್ಟು 35 ಮಂದಿ ಇದ್ದರು.
X ನಲ್ಲಿ ಆಲ್ ಇಂಡಿಯಾ ರೇಡಿಯೊ ನ್ಯೂಸ್ ಹಂಚಿಕೊಂಡ ವಿಡಿಯೋ ಉತ್ತರಕಾಶಿಯಲ್ಲಿ ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ತೋರಿಸುತ್ತದೆ.
#Uttarakhand: Seven people killed and 28 others injured when a bus fell into a gorge near Gangnani on the Gangotri National Highway in Uttarkashi district.
As soon as the information of the accident was received, NDRF, SDRF and police started relief and rescue operations with… pic.twitter.com/K5eVckO18j
— All India Radio News (@airnewsalerts) August 20, 2023
ರಕ್ಷಣೆ ಮಾಡಿದ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸಮೀಪದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ತ್ವರಿತ ಆರಂಭಕ್ಕೆ ನಿರ್ದೇಶನಗಳನ್ನು ನೀಡಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅಪಘಾತಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಉತ್ತರಾಖಂಡ ಸರ್ಕಾರದೊಂದಿಗೆ ತಮ್ಮ ಸರ್ಕಾರ ಸಂಪರ್ಕದಲ್ಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!