ಜೀಪಿಗೆ ಕಾರು ನೇರ ಢಿಕ್ಕಿ; 7 ಮಂದಿ ಸಾವು; 14 ಮಂದಿಗೆ ಗಾಯ
Team Udayavani, Nov 28, 2017, 12:08 PM IST
ಔರಂಗಾಬಾದ್, ಮಹಾರಾಷ್ಟ್ರ : ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಇಂದು ಮಂಗಳವಾರ ನಸುಕಿನ ವೇಳೆ ಅತಿ ವೇಗದಿಂದ ಧಾವಿಸುತ್ತಿದ್ದ ಕಾರೊಂದು ಎದುರುಗಡೆಯಿಂದ ಬರುತ್ತಿದ್ದ ಜೀಪಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಏಳು ಮಂದಿ ಮೃತಪಟ್ಟು ಇತರ 14 ಮಂದಿ ಗಾಯಗೊಂಡರು.
ನತದೃಷ್ಟ ಎಸ್ಯುವಿ ಕಾರು ಪಂಡರಾಪುರದಿಂದ ನಾಂದೇಡ್ಗೆ ಹೋಗುತ್ತಿತ್ತು. ಲಾತೂರ್ನ ಕೋಲ್ಪಾ ಪಾಟಿ ಗ್ರಾಮದಲ್ಲಿ ನಸುಕಿನ 4.50ರ ಹೊತ್ತಿಗೆ ಅದು ಎದುರುಗಡೆಯಿಂದ ಬರುತ್ತಿದ್ದ ಜೀಪಿಗೆ ನೇರವಾಗಿ ಢಿಕ್ಕಿ ಹೊಡೆಯಿತು ಎಂದು ಲಾತೂರಿನ ವಿವೇಕಾನಂದ ಚೌಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಭಟಾಲ್ವಾಂಡೆ ತಿಳಿಸಿದರು.
ತನ್ನ ಮುಂದುಗಡೆ ಸಾಗುತ್ತಿದ್ದ ಟೆಂಪೋವನ್ನು ಹಿಂದಿಕ್ಕುವ ಭರದಲ್ಲಿ ಅತಿ ವೇಗವಾಗಿ ಕಾರನ್ನು ನಡೆಸಿದ ಚಾಲಕನಿಗೆ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಅದು ಎದುರುಗಡೆಯಿಂದ ಬರುತ್ತಿದ್ದ ಜೀಪಿಗೆ ಢಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ಎಲ್ಲ 7 ಮಂದಿ ಸ್ಥಳದಲ್ಲೇ ಸಾವಪ್ಪಿದ್ದರು. ಇವರನ್ನು ತುಕಾರಾಮ ದಳವಿ 34, ಮನೋಜ್ ಶಿಂಧೆ 25, ಶುಭಂ ಶಿಂಧೆ 23, ದತ್ತು ಶಿಂಧೆ 34, ವಿಜಯ್ ಪಾಂಡೆ 30, ಉಮಾಕಾಂತ್ ಕರುಳೆ 45 ಮತ್ತು ಮೀನಾ ಉಮಾಕಾಂತ್ ಕರುಳೆ 39 ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’